ರಾಜ್ಯದ ಎಲ್ಲಾ ಕಲ್ಲುಕ್ವಾರಿಗಳ ಸರ್ವೆ ಕಾರ್ಯ ನಡೆಸಿ, 1 ತಿಂಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ಶಿವಮೊಗ್ಗ ಕಲ್ಲುಕ್ವಾರಿಯಲ್ಲಿ ಸ್ಪೋಟಕದ ನಂತರ ತುಮಕೂರಿನಲ್ಲೂ ನಿನ್ನೆ ಜಿಲೆಟಿನ್ ಕಡ್ಡಿ ಸ್ಪೋಟಗೊಂಡಿತ್ತು. ಪ್ರಕರಣವೊಂದರ ಸಂಬಂಧ ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠವು ಈ ಆದೇಶ ಮಾಡಿದೆ.
ಬುಧವಾರ ಪ್ರಕರಣವೊಂದರ ಕುರಿತಂತೆ ವಿಚಾರಣೆ ಕೈಗೆತ್ತಿಕೊಂಡ ರಾಜ್ಯ ಹೈಕೋರ್ಟ್ ನ ವಿಭಾಗೀಯ ಪೀಠವು, ಕಲ್ಲು ಕ್ವಾರಿಯಿಂದಾಗಿ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂಬುದಾಗಿ ಕಳವಳ ವ್ಯಕ್ತ ಪಡಿಸಿತು.
ಕ್ವಾರಿಗಳಲ್ಲಿ ನಿಯಮ ಪಾಲಿಸಲಾಗುತ್ತಿದೆಯೇ.? ನಿಯಮ ಪಾಲಿಸದ ಕ್ವಾರಿಗಳ ಮೇಲೆ ಕ್ರಮವೇನು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ರಾಜ್ಯದಲ್ಲಿರುವಂತಹ ಕಲ್ಲು ಕ್ವಾರಿಗಳ ಬಗ್ಗೆ ಸರ್ವೇ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.
ಈ ನಡುವೆ ರಾಜ್ಯದಲ್ಲಿನ ಕಲ್ಲುಕ್ವಾರಿಗಳ ಬಗ್ಗೆ ಸರ್ವೆ ನಡೆಸಿ, ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಪೀಠ ಸೂಚಿಸಿ ಮಾರ್ಚ್ 8ಕ್ಕೆ ವಿಚಾರಣೆಯನ್ನು ಮುಂದೂಡಿತು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment