ನ್ಯಾಯಾಲಯ ಆದೇಶ ನಂತರವೂ ವ್ಯಕ್ತಿಯೊಬ್ಬರಿಗೆ ಜಮೀನಿನ ಖಾತೆ ಮಾಡಿಕೊಡದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಲಾಗಿದೆ.
ಹೈಕೋರ್ಟ್ ನ ಏಕ ಸದಸ್ಯ ಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಮೈಸೂರಿನ ಎಚ್.ಬಿ. ಅಶೋಕ್ ಸೇರಿ 5 ಮಂದಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಆರೋಪಿತ ಅಧಿಕಾರಿ ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಜಮೀನು ಖಾತೆ ಮಾಡಿಕೊಡಲು ಹಲವು ಸಮಸ್ಯೆಗಳಿವೆ. ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ, ವಿವಾದಿತ ಭೂಮಿಗೆ ಹಲವರು ಹಕ್ಕು ಸಾಧನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಹಾಗೂ ನ್ಯಾಯಾಲಯದ ಆದೇಶ ಪಾಲಿಸಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಡಿಸಿ ರೋಹಿಣಿ ನೀಡಿದ ಸಬೂಬುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇದೀಗ ನೀವು ದಾಖಲೆಗಳನ್ನು ಏಕೆ ಸಲ್ಲಿಸುತ್ತೀರಿ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಹಂತದಲ್ಲಿ ನೀವು ದಾಖಲೆಗಳನ್ನು ಪರಿಶೀಲಿಸುವುದು, ಸಲ್ಲಿಸುವುದು ಎಂದರೆ ಏನರ್ಥ. ಇಂತಹ ಅಧಿಕಾರ ನಿಮಗೆ ಹೇಗೆ ಲಭ್ಯವಿದೆ. ನಿಮಗೆ ನ್ಯಾಯಾಲಯದ ಆದೇಶ ಪಾಲಿಸಬೇಕೆಂಬ ಇಚ್ಛೆಯೇ ಇದ್ದಂತಿಲ್ಲ ಎಂದಿತು.
ಸರ್ಕಾರಿ ವಕೀಲರನ್ನು ಉದ್ದೇಶಿಸಿ, ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಹೇಳಿಕೊಡಿ. ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸುವ ಮುನ್ನ ಹೇಳಬೇಕಿದ್ದ ವಿಚಾರಗಳನ್ನು ಈಗ ಹೇಳಲು ಬರುತ್ತಿದ್ದಾರೆ. ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶಗಳ ಬಗ್ಗೆ ತಿಳಿದಂತೆ ಕಾಣುವುದಿಲ್ಲ. ಜತೆಗೆ ತಾವು ಅಂದುಕೊಂಡದ್ದು ಹಾಗೂ ನಡೆದುಕೊಂಡದ್ದೇ ಸರಿ ಎಂದು ಭಾವಿಸಿದ್ದಾರೆ. ಅಧಿಕಾರಿಗಳು ನ್ಯಾಯಾಲಯದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಿ ಎಂದು ಪೀಠ ಬೇಸರ ವ್ಯಕ್ತಪಡಿಸಿತು.
ಮಾಚ್೯ 8 ರಂದು ಖುದ್ದು ಹಾಜರಿಗೆ ಸೂಚನೆ :
ಪ್ರಕರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ತಹಶೀಲ್ದಾರ್ ಕೆ.ಆರ್. ರಕ್ಷಿತ್ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಈ ಇಬ್ಬರೂ ಆರೋಪಿ ಅಧಿಕಾರಿಗಳ ವಿರುದ್ಧ ಮಾರ್ಚ್ 8ರಂದು ಆರೋಪ ನಿಗದಿಪಡಿಸಲಾಗುವುದು. ಆದ್ದರಿಂದ ಇಬ್ಬರೂ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಪೀಠ ಆದೇಶಿಸಿತು.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕುರುಬಾರಹಳ್ಳಿಯಲ್ಲಿ ಅರ್ಜಿದಾರ ಅಶೋಕ್ ಸೇರಿದಂತೆ ಕೆಲ ವ್ಯಕ್ತಿಗಳು ಬಿ ಖರಾಬ್ ಜಮೀನು ಖಾತೆಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಿಲ್ಲಾಧಿಕಾರಿ ಅರ್ಜಿಗಳನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿದಾರರಿಗೆ ಖಾತೆ ಮಾಡಿಕೊಡುವಂತೆ 2020ರ ಜೂನ್ 19ರಂದು ಆದೇಶಿಸಿತ್ತು. ಈ ಆದೇಶ ನಿರ್ಲಕ್ಷ್ಯ ಮಾಡಿರುವುದೇ ನ್ಯಾಯಾಂಗ ನಿಂದನೆ ಗುರಿ ಆದಂತಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment