ಹಿಜಾಬ್ ನಿಷೇಧ ಆದೇಶ ವಾಪಸ್ : ಸಿಎಂ ಸಿದ್ದು

Team Newsnap
1 Min Read

ಮೈಸೂರು : ಬಿಜೆಪಿ ಸರ್ಕಾರ ಜಾರಿ ತಂದ ಹಿಜಾಬ್ ನಿಷೇಧದ ಆದೇಶ ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು .

ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ.

ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಘೋಷಣೆಯೇ ಬೋಗಸ್ ಎಂದು ಜರಿದರು .ಸಂಸದರ ಅಮಾನತ್ತು ಸಿಎಂ ಸಿದ್ದರಾಮಯ್ಯ ಕಟು ಟೀಕೆ

ಊಟ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಹೇಳಿದರು .

Share This Article
Leave a comment