ನಾಳೆ ಹಿಜಾಬ್ (Hijab)​​ ತೀರ್ಪು – Full alert ಬೆಂಗಳೂರಲ್ಲಿ ಇಂದಿನಿಂದ 1 ವಾರ ನಿಷೇಧಾಜ್ಞೆ

Team Newsnap
1 Min Read
shock for Congress: High Court order to cancel ACB - Lokyukta gets power again

ನಾಳೆ ಹಿಜಾಬ್ (Hijab)​​​​​ ಕೇಸ್​​ ಕುರಿತು ಹೈಕೋರ್ಟ್ ತನ್ನ ತೀರ್ಪು ನೀಡಲಿದೆ.

ಹೈಕೋರ್ಟ್​ ತ್ರಿಸದಸ್ಯ ಪೀಠ ಹಿಜಾಬ್​​ ಕೇಸ್​ ಕುರಿತು ತೀರ್ಪು ನೀಡಲಿರುವ ಕಾರಣ ಯಾವುದೇ ಅನಾಹುತ ಸಂಭವಿಸಿದಂತೆ ಬೆಂಗಳೂರಿನಲ್ಲಿ ಒಂದು ವಾರ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ . ಅಲ್ಲದೇ ಸಕಲರೀತಿಯ ಬಂದೋಬಸ್ತು. ಮಾಡಲಾಗುತ್ತಿದೆ

ಬೆಂಗಳೂರು ಪೋಲಿಸ್ ಕಮೀಷನರ್ ಕಮಲ್ ಪಂತ್ ಡಿಸಿಪಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಮಲ್​ ಪಂತ್​ ಸಂವಾದ ನಡೆಸಿದ್ದಾರೆ.

ಸಭೆ ಬಳಿಕ ಎಲ್ಲಾ ಶಾಲಾ ಕಾಲೇಜುಗಳ ಬಳಿ ಭದ್ರತೆ ಹೆಚ್ಚಳಕ್ಕೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ ಇಂದಿನಿಂದ 1 ವಾರ ಕಾಲ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅನಾಹುತ ಸಂಭವಿಸದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ನಗರದಲ್ಲಿ ಭದ್ರತೆಗಾಗಿ 10,000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುವುದು ಎಂದರು.

ಯಾವುದೇ ಪ್ರತಿಭಟನೆ, ಧರಣಿ ಅವಕಾಶವಿಲ್ಲ. ಹೆಚ್ಚುವರಿಯಾಗಿ ಕೆಎಸ್​ಆರ್​ಪಿ, ಸಿಎಆರ್ ತುಕಡಿ ನಿಯೋಜನೆ ಮಾಡಲಾಗುತ್ತೆ. ಹೈಕೋರ್ಟ್​ ಆದೇಶ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

(Hijab)​​

Share This Article
Leave a comment