ನ್ಯಾಯಾಲಯದ ಸೂಚನೆಯ ನಂತರವೂ ಹಿಜಬ್ ಧರಿಸಿ ಬರುವುದು ತಪ್ಪಾಗುತ್ತದೆ. ಯಾವುದೇ ಕಾರಣಕ್ಕೂ ಹಿಜಬ್ ಧರಿಸಿ ಬರಲು ಬಿಡಲ್ಲ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಚಾಮರಾಜನಗರದಲ್ಲಿ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಇಲ್ಲ. ಆದರೆ ಹಿಜಬ್ ಧರಿಸಿ ಶಾಲೆಗೆ ಬರಲು ಕಾನೂನಿನಲ್ಲಿ ಅವಕಾಶವಿಲ್ಲ. ಕಾನೂನು ಗೌರವಿಸುವುದನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು.
ಎಂದು ಸಲಹೆ ನೀಡಿದರು.
ಹೈಕೋರ್ಟ್ ಸೂಚನೆಯ ನಡುವೆಯೂ ಹಿಜಬ್ ಧರಿಸಿ ಬರುವುದು ಸರಿಯಲ್ಲ.
ಕಾನೂನು ಉಲ್ಲಂಘಿಸುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಶಾಲಾ-ಕಾಲೇಜುಗಳಿಗೆ ಹೊರಗಿನ ಶಕ್ತಿಗಳು ಪ್ರವೇಶ ಮಾಡಬಾರದು. ಹೊರಗಿನವರು ಬಾರದಂತೆ ನೋಡಿಕೊಳ್ಳುವುದು ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಜವಾಬ್ದಾರಿ. ಯಾರೂ ಯಾರನ್ನು ಟೀಕೆ, ಆರೋಪ ಮಾಡಿ ಗೊಂದಲ ನಿರ್ಮಾಣ ಮಾಡುವುದು ಬೇಡ. ನಾಳೆಯಿಂದ ಪದವಿ ಕಾಲೇಜುಗಳು ಪುನರಾರಂಭವಾಗಲಿವೆ ಎಂದು ಹೇಳಿದರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ