ಶಿವಮೊಗ್ಗದ ಸೀಗೆಹಟ್ಟಿಯಲ್ಲಿ ದುಷ್ಕಮಿ೯ಗಳ ಗುಂಪೊಂದು ಬಜರಂಗದಳ ಕಾರ್ಯಕತ೯ನೂ ಆಗಿರುವ ಹಿಂದೂ ಯವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಳೆದ ರಾತ್ರಿ 8.50 ರ ವೇಳೆಗೆ ಸಂಭವಿಸಿದೆ.
ಭಾರತಿ ಕಾಲೋನಿಯ ಹಷ೯ (21) ಎಂಬ ಯುವಕನೇ ಕೊಲೆಯಾದವನು. ಹಳೇ ವೈಷಮ್ಯಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾದರೂ ಈ ಘಟನೆ ನಂತರ ಶಿವಮೊಗ್ಗ ನಗರವು ಭಾರಿ ಬಿಗುವಿನಿಂದ ಕೂಡಿದೆ.
ಈ ಘಟನೆ ಖಂಡಿಸಿ ಶಿವಮೊಗ್ಗ ದ ಕೆಲವು ಕಡೆ ಕಲ್ಲು ತೂರಾಟ ನಡೆಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗಲಾಟೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ನಗರದಲ್ಲಿ 144 ನೇ ಸೆಕ್ಷನ್ ಜಾರಿ ಮಾಡಲಾಗಿದೆ.
ನಗರದ ಎಲ್ಲೆಡೆ ಬಿಗಿ ಪೋಲೀಸ್ ಬಂದೋಬಸ್ತು ಹಾಕಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗಕ್ಕೆ ಈ ಬೆಳಿಗ್ಗೆ ಭೇಟಿ ನೀಡಿದರು. ಯುವಕನ ಶವ ನೋಡಲು ಶವಾಗಾರಕ್ಕೆ ಭೇಟಿ ನೀಡಿ ಯುವಕನ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಈ ದುಷ್ಕ್ಯತ ಹಿಂದಿರುವ ಆರೋಪಿಗಳನ್ನು ಕೂಡಲೇ ಹೆಡಮುರಿ ಕಟ್ಟಿ ತರಲು ಪೋಲಿಸರು ಯೋಜನೆ ರೂಪಿಸಿದ್ದಾರೆ ಎಂದು ಸಚಿವ ಜ್ಞಾನೇಂದ್ರ ಹೇಳಿದರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
- ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು