ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ಸಚಿವ ನಾರಾಯಣಗೌಡ ಹಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಬುಧವಾರ ಚಾಲನೆ ನೀಡಿದರು.
ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಅಂಬಾರಿ ಹೊತ್ತ ಮಹೇಂದ್ರನ ಜೊತೆ ಕಾವೇರಿ ಮತ್ತು ವಿಜಯ ಆನೆಗಳು ಹೆಜ್ಜೆ ಹಾಕಿದವು. ವೀರಗಾಸೆ, ಡೊಳ್ಳುಕುಣಿತ, ಟಮಟೆ, ಸೋಮನ ಕುಣಿತ, ನವಿಲು ಕುಣಿತ ಸೇರಿದಂತೆ ಹತ್ತಾರು ಕಲಾ ತಂಡಗಳ ಪ್ರದರ್ಶನ ಮನಸೂರೆಗೊಳಿಸಿತು. ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಪರಿಷ್ಕರಣೆಗೆ ಸಮಿತಿ ರಚನೆಗೆ ನಿರ್ಧಾರ : ಡಿಸೆಂಬರ್ ಅಂತ್ಯಕ್ಕೆ ವರದಿ
ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಹುಲ್ಮನಿ,ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್,ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರೆನ್,
ಸೇರಿದಂತೆ ಭಾನುಪ್ರಕಾಶ್ , ಇತರರು ಉಪಸ್ಥಿತರಿದ್ದರು.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ