ಇದನ್ನು ಓದಿ -ಅಗ್ನಿ-4 ಕ್ಷಿಪಣಿ ಪರೀಕ್ಷೆ ಪ್ರಯೋಗ ಯಶಸ್ವಿ- 4000 ಕಿ.ಮೀ. ದೂರದಿಂದಲೇ ಶತ್ರುಪಡೆ ನಾಶ
ಹಿಜ್ಬುಲ್ ಮುಜಾಹಿದ್ದೀನ್ನ ಮಾಸ್ಟರ್ಮೈಂಡ್ ತಾಲಿಬ್ ಹುಸೇನ್ ಬಂಧಿತ ಉಗ್ರ. ಉಗ್ರನ ಬಂಧನ ವಿಚಾರವನ್ನು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.
ಜಮ್ಮುವಿನ ಕಿಸ್ತ್ವಾರ್ ಜಿಲ್ಲೆ ನಾಗಸೇನಿ ತಹಸಿಲ್ ಮೂಲದ ತಾಲಿಬ್ ಹುಸೇನ್, 2016ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ್ದ. ಬುಡಕಟ್ಟು ಜನಾಂಗದ ತಾಲಿಬ್ಗೆ ಇಬ್ಬರು ಪತ್ನಿಯರು, ಐವರು ಮಕ್ಕಳಿದ್ದಾರೆ.
ಮೊದಲಿಗೆ ಯುವಕರನ್ನು ಟಾರ್ಗೆಟ್ ಮಾಡಿ, ಅವರ ಮನಪರಿವರ್ತಿಸಿ ಉಗ್ರ ಸಂಟನೆಗೆ ಸೇರ್ಪಡೆ ಮಾಡುತ್ತಿದ್ದ. ನಂತರ ಇವರನ್ನೇ ಬಳಸಿಕೊಂಡು ಹಿಂದುಗಳ ಹತ್ಯೆಗೆ ಸ್ಕೆಚ್ ರೂಪಿಸುತ್ತಿದ್ದ. ಬಾಂಬ್ ಸ್ಫೋಟ ಪ್ರಕರಣಗಳಲ್ಲಿಯೂ ಈತ ಭಾಗಿಯಾಗಿದ್ದ. ಕೇಂದ್ರ ಪಡೆಗಳ ಹಿಟ್ಲೀಸ್ಟ್ ಸೇರುತ್ತಿದ್ದಂತೆ ತಾಲಿಬ್ ಹುಸೇನ್ ಪರಾರಿಯಾಗಿದ್ದ. 2 ವರ್ಷಗಳ ಹಿಂದೆ ಓರ್ವ ಪತ್ನಿಯೊಂದಿಗೆ ಬೆಂಗಳೂರಿಗೆ ಬಂದು ಶ್ರೀರಾಂಪುರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ.
ಉಗ್ರನ ಬಂಧನಕ್ಕಾಗಿ ಕೇಂದ್ರೀಯ ಪಡೆಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರೂ ಸುಳಿವು ಮಾತ್ರ ಲಭ್ಯವಾಗಿರಲಿಲ್ಲ.
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಸಂದರ್ಭದಲ್ಲಿ ತಾಲಿಬ್ ಹುಸೇನ್ ಬೆಂಗಳೂರಿನಲ್ಲಿ ಅಡಗಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಒಂದು ವಾರದ ಹಿಂದೆ ಬೆಂಗಳೂರಿಗೆ ಬಂದ ರಾಷ್ಟ್ರೀಯ ರೈಲ್ಸ್ ಪಡೆ ಮತ್ತು ಸಿಆರ್ಪಿಎ ವಿಶೇಷ ತಂಡ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮಾಹಿತಿ ವಿನಿಮಯ ಮಾಡಿಕೊಂಡಿತ್ತು.
ಉಗ್ರನ ಮನೆ ಪತ್ತೆ ಹಾಗೂ ಬಂಧನ ಕಾರ್ಯಾಚರಣೆಗೆ ಸಹಕರಿಸುವಂತೆ ಮನವಿ ಮಾಡಿದ್ದರು. ಸ್ಥಳಿಯ ಪೊಲೀಸರು ಉಗ್ರನ ಮನೆಯನ್ನು ಪತ್ತೆಹಚ್ಚಿ ಮಾಹಿತಿ ನೀಡಿದ್ದರು. ಆರೋಪಿಯನ್ನು ಬಂಧಿಸಿ ಜಮ್ಮು-ಕಾಶ್ಮೀರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶ್ರೀರಾಂಪುರದ ಬಾಡಿಗೆ ಮನೆಯಲ್ಲಿ ತಾಲೀಬ್ ಹಾಗೂ ಆತನ ಪತ್ನಿ ವಾಸವಿದ್ದರೂ ಅಕ್ಕಪಕ್ಕದ ಮನೆಯವರಿಗಾಗಲಿ ಅಥವಾ ಮನೆ ಮಾಲೀಕರಿಗಾಗಲಿ ಅನುಮಾನ ಬಂದಿರಲಿಲ್ಲ. ಆಟೋ ಓಡಿಸಿಕೊಂಡು, ಮಾಮೂಲಿಯಾಗಿ ದಂಪತಿ ವಾಸವಿದ್ದರು. ಪೊಲೀಸರು ಬಂಧಿಸಿದಾಗಲೇ ಆತ ಉಗ್ರ ಎಂಬ ವಿಚಾರ ಗೊತ್ತಾಗಿದೆ.
ಸಿಎಂ ಬೊಮ್ಮಾಯಿ ಹೇಳಿಕೆ:
ಉಗ್ರನ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರಿನಲ್ಲಿ ನೆಲೆಯೂರಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿರುವುದು ನಿಜ. ಮುಂದಿನ ಹಂತದ ತನಿಖೆಗೆ ಬೇಕಾದ ಎಲ್ಲ ಸಹಕಾರವನ್ನು ಜಮ್ಮು-ಕಾಶ್ಮೀರ ಪೊಲೀಸರಿಗೆ ನಮ್ಮ ಪೊಲೀಸರು ನೀಡುವರು ಎಂದು ಹೇಳಿದರು.
ಆರ್ ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಸಂಶಯಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾವಹಿಸುವುದು ಸಹಜ. ಈ ಹಿಂದೆ ಭಟ್ಕಳ, ಶಿರಸಿಯಲ್ಲಿ ಇಂತಹವರನ್ನು ಬಂಧಿಸಿ ಕರೆದೊಯ್ದ ನಿದರ್ಶನಗಳಿವೆ ಎಂದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment