ಹೋಳಿ ಆಡಿ, ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಬಾಲಕರು ಜಲ ಸಮಾಧಿ

Team Newsnap
0 Min Read

ಬಣ್ಣದಾಟದ ನಂತರ ನದಿಗೆ ಸ್ನಾನಕ್ಕೆಂದು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಓರ್ವ ಬಾಲಕ ತೀವ್ರ ಅಸ್ವಸ್ಥಗೊಂಡ ಘಟನೆ ಹಾವೇರಿ
ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವರದಾ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕರನ್ನು ಮಹೇಶ್ ಮುರಡಣ್ಣನವರ್ (10), ವೀರೇಶ್ ಅಕ್ಕಿವಳ್ಳಿ (10) ಎಂದು ಗುರುತಿಸಲಾಗಿದೆ.

ಯೋಗೇಶ್ ಎಂಬ 7 ವರ್ಷದ ಬಾಲಕ ತೀವ್ರ ಅಸ್ವಸ್ಥಗೊಂಡಿದ್ದಾನೆ.‌ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಇಬ್ಬರು ಬಾಲಕರ ದೇಹಗಳನ್ನು ಸ್ಥಳೀಯರು ವರದಾ ನದಿಯಿಂದ ಹೊರ ತೆಗೆದಿದ್ದಾರೆ.

ಹಾವೇರಿ ಗ್ರಾಮಾಂತರ ಠಾಣೆಯ ಪೋಲಿಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ಥಿದ್ದಾರೆ.

Share This Article
Leave a comment