Karnataka

‘ಆಶಾ ಕಾರ್ಯಕರ್ತೆ’ಯರ ಗೌರವಧನ 7 ಸಾವಿರ ರೂ.ಗೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರ ಆಶಾ ಕಾರ್ಯಕರ್ತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ 7 ಸಾವಿರ ರೂ. ಗೆ ಹೆಚ್ಚಳ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು ,ಇಂದು ಅವರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು ಶೀಘ್ರದಲ್ಲೇ ರಾಜ್ಯದ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ನೀಡುವ 5 ಸಾವಿರ ರೂ. ಜೊತೆಗೆ 2 ಸಾವಿರ ರೂ. ಸೇರಿಸಿ ಒಟ್ಟು 7 ಸಾವಿರ ರೂ. ನೀಡಲಾಗುವುದು.‌

ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹ ಧನವನ್ನು ಪಾರದರ್ಶಕವಾಗಿ ನೀಡಲಾಗುವುದು.

ಈಗಾಗಲೇ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯಡಿ ನೀಡುವ 2 ಸಾವಿರ ರೂ. ಆಶಾ ಕಾರ್ಯಕರ್ತೆಯರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ.ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಿಟ್ಟ ಮಾಜಿ ಪ್ರಧಾನಿಗಳು

ಆರೋಗ್ಯ ವಿಮೆಯನ್ನು 5 ಲಕ್ಷ ಆಶಾ ಕಾರ್ಯಕರ್ತೆಯರಿಗೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

Team Newsnap
Leave a Comment

Recent Posts

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ

ಮೈಸೂರು: ಸರ್ಕಾರ ಹಾಗು ಜಿಲ್ಲಾಡಳಿತ ಮೈಸೂರು ದಸರಾ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು , ಮೈಸೂರು ದಸರಾ-2024ರ ವೇಳಾಪಟ್ಟಿಯನ್ನು ಬಿಡುಗಡೆ… Read More

September 28, 2024

ಭಾರಿ ಅವಘಡ : ಟಾಟಾ ಫ್ಯಾಕ್ಟರಿಯಲ್ಲಿ ಬೆಂಕಿ

ಚೆನ್ನೈ: ತಮಿಳುನಡಿನ ಕೂತನಹಳ್ಳಿಯಲ್ಲಿ ಟಾಟಾ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ… Read More

September 28, 2024

MLA ಮುನಿರತ್ನ ಮನೆ ಮೇಲೆ SIT ದಾಳಿ

ಬೆಂಗಳೂರು: ಇಂದು ಬೆಳಿಗ್ಗೆ ಬಿಜೆಪಿ MLA ಮುನಿರತ್ನ ಮನೆ ಮೇಲೆ SIT ದಾಳಿ ನಡೆಸಿದ್ದಾರೆ. ಅತ್ಯಾಚಾರ, ಜಾತಿ ನಿಂದನೆ ಹಾಗೂ… Read More

September 28, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More

September 27, 2024

ಇಬ್ಬರು ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More

September 27, 2024

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನಬೆಂಗಳೂರು

ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More

September 26, 2024