ಗ್ರಾಮಕ್ಕೆ ವಕ್ಕರಿಸಿರುವ ಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಲು ಗ್ರಾಮದಲ್ಲಿ ಬಿಟ್ಟಿದ್ದ ಮರಡಿಮಠದ ಶೌರ್ಯ ಕುದುರೆ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.
ಶೌರ್ಯ ಕುದುರೆ ಏಕಾಏಕಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮಠದ ದೇವರ ಕುದುರೆ ಸಾವನ್ನಪ್ಪಿದ ಕಾರಣ ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಲು ಮುಂದಾಗಿದ್ದ ಗ್ರಾಮಸ್ಥರು, ಸಾವಿರಾರರು ಸಂಖ್ಯೆ ಸೇರಿ ಮೆರವಣಿಗೆ ಮಾಡಿದ್ದಾರೆ.
ಮೆರವಣಿಗೆ ವೇಳೆ ಯಾವುದೇ ಸಾಮಾಜಿ ಅಂತರ, ಮಾಸ್ಕ್ ಇಲ್ಲದೇ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ತಹಶಿಲ್ದಾರ್ ಹೊಳೆಪ್ಪಗೋಳ , ಗ್ರಾಮಕ್ಕೆ ಭೇಟಿ ನೀಡಿ, ಭಕ್ತರು ಮಠ ಪ್ರವೇಶ ಮಾಡದಂತೆ ಮರಡಿ ಮಠವನ್ನು ಸೀಲ್ ಡೌನ್ ಮಾಡಿದ್ದಾರೆ.
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India