February 21, 2026

Newsnap Kannada

The World at your finger tips!

HORTTI B

ಬಿಜೆಪಿ ಸೇರಿದ ಸಭಾಪತಿ ಬಸವರಾಜ್ ಹೊರಟ್ಟಿ : ಜೆಡಿಎಸ್ ನ ಇನ್ನೊಂದು ವಿಕೆಟ್ ಪತನ

Spread the love

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾದಂತಾಗಿದೆ . ಕಳೆದ ಮೂರು ತಿಂಗಳ ಹಿಂದೆಯೆ ಹೊರಟ್ಟಿ ಬಿಜೆಪಿ ತೊರೆಯುವುದಾಗಿ ಹೇಳಿದ್ದರು.

ಈ ಮಾತಿನಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ‌ ಜಗದೀಶ್ ಶೆಟ್ಟರ್ ಜತೆ ಹೊರಟ್ಟಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿರುವ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಇದುವರೆಗೆ ಯಾರಿಗೂ ಟಿಕೆಟ್ ಘೋಷಿಸಿಲ್ಲ. ಹೊರಟ್ಟಿ ಸೇರ್ಪಡೆ ಬಳಿಕ ಘೋಷಣೆ ಮಾಡಲು ನಿರ್ಧರಿಸಲಾಗಿತ್ತು.

ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತ ನಾಯಕತ್ವ ಬಲಪಡಿಸಲು ಹಿರಿಯ ನಾಯಕ ಬಸವರಾಜ ಹೊರಟ್ಟಿಯವರನ್ನು ಪಕ್ಷಕ್ಕೆ ಕರೆತರಲಾಗಿದೆ.

error: Content is protected !!