ಬೆಂಗಳೂರು : ರಾಜಧಾನಿ ಸೇರಿದಂತೆ ರಾಜ್ಯದ ಹಲವೆಡೆ ರಣಬಿಸಿಲು ಕಾಡಲಿದೆ ಎಂದು ಹವಾಮಾನ ಇಲಾಖೆ (Meterological Department) ಎಚ್ಚರಿಕೆ ನೀಡಿದೆ.
ಬೇಸಿಗೆ ಕಾಲ ಈಗಾಗಲೇ ಶುರವಾಗಲಿದ್ದು , ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಜನರನ್ನು ರಣಬಿಸಿಲು ಬರುವ ಮುಂದಿನ ನಾಲ್ಕು ತಿಂಗಳು ಕಾಡಲಿದೆ ಎಚ್ಚರಿಕೆ ನೀಡಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆ ,ಎಂದಿಗಿಂತ ಮುನ್ನವೇ ಈ ಬಾರಿ ಬೇಸಿಗೆ ಬಿಸಿಲು ಆರಂಭವಾಗಲಿದೆ.
ತೇವಾಂಶ ಭರಿತ ಮೋಡಗಳ ಸೆಳೆತ ಮತ್ತು ಗಾಳಿ ವೇಗ ಇಲ್ಲದಿರುವುದರ ಪರಿಣಾಮ ವಾತಾವರಣದಲ್ಲಿ ತೀವ್ರ ತೇವಾಂಶ ಕೊರತೆಯಿಂದ ರಣಬಿಸಿಲು ಕಾಡಲಿದೆ ಎಂದು ತಿಳಿಸಲಾಗಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಫೆಬ್ರವರಿಯಲ್ಲೇ 33-25 ಡಿಗ್ರಿ ಸೆಲ್ಸಿಯಸ್ಗೆ ಉಷ್ಣಾಂಶ ಏರಿಕೆಯಾಗಿ ,ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಲಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು