ಆ ವಯಸ್ಸಿನಲ್ಲಿ ಕುಂಬಳಕಾಯಿ ಬೀಜಗಳು ದೇಹಕ್ಕೆ ಹೇಗೆಲ್ಲಾ ಉಪಯೋಗಗಳನ್ನು ನೀಡುತ್ತಿತ್ತು ಎಂಬುದರ ಅರಿವು ನಮಗಿರಲಿಲ್ಲ. ಈಗಂತೂ ಸಮಯದ ಅಭಾವದಿಂದ ಅದನ್ನು ಒಣಗಿಸಿ ಸಿಪ್ಪೆ ತೆಗೆದು ತಿನ್ನುವುದನ್ನು ಮರೆತೇ ಹೋಗಿದ್ದೇವೆ ಎಂದರೆ ತಪ್ಪಾಗಲಾರದು.
ಕುಂಬಳಕಾಯಿಯಿಂದ ಯಾವುದೇ ಖಾದ್ಯವನ್ನು ತಯಾರಿಸುವಾಗಲೂ ಬೀಜವನ್ನು ಎಸೆಯುತ್ತೇವೆ, ಇದರಿಂದ ಪ್ರಯೋಜನವಿಲ್ಲ ಎಂದುಕೊಳ್ಳುವವರೇ ಜಾಸ್ತಿ. ಕುಂಬಳಕಾಯಿ ಬೀಜಗಳು ನೋಡಲು ಚಿಕ್ಕದಾಗಿದ್ದರೂ, ಇದರಿಂದ ಅಪಾರವಾದ ಆರೋಗ್ಯ ಪ್ರಯೋಜನಗಳಿವೆ. ನಮ್ಮ ದೈನಂದಿನ ಆಹಾರದಲ್ಲಿ ಕುಂಬಳಕಾಯಿ ಬೀಜಗಳನ್ನು ಸೇವಿಸುವ ಮೂಲಕ, ದೀರ್ಘಕಾಲೀನ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಮುಖ್ಯವಾಗಿ ಕುಂಬಳಕಾಯಿ ಬೀಜಗಳಲ್ಲಿ ಕಬ್ಬಿಣ, ನಾರಿನಾಂಶ, ವಿಟಮಿನ್ ಕೆ, ಮ್ಯಾಂಗನೀಸ್, ಮೆಗ್ನೀಶಿಯಮ್ಗಳಿಂದ ಸಮೃದ್ಧವಾಗಿದೆ. ಕ್ಯಾಲ್ಸಿಯಂ, ಬಿ 2, ಫೋಲೇಟ್ ಮತ್ತು ಬೀಟಾ ಕ್ಯಾರೋಟಿನ್ ನಂತಹ ಪೋಷಕಾಂಶಗಳಿವೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ.
1.ಮೆಗ್ನೀಶಿಯo ಕೊರತೆಯಿಂದ ಹೃದಯ ಬಡಿತದಲ್ಲಿ ಏರುಪೇರುಂಟಾಗಿ ಅನಿರೀಕ್ಷಿತ ಹೃದಯಾಘಾತವುಂಟಾಗುವ ಅಪಾಯವಿರುತ್ತದೆ. ಕುಂಬಳ ಬೀಜದ ಸೇವನೆಯು ಹೃದಯಾಘಾತದ ಅಪಾಯದಿಂದ ದೂರವಿಡಲು ಸಹಾಯ ಮಾಡುತ್ತದೆ.
2.ಕುಂಬಳ ಬೀಜದಲ್ಲಿ ಹೇರಳವಾಗಿರುವ ಮೆಗ್ನೀಶಿಯo ಸತ್ವವು ರಕ್ತನಾಳಗಳನ್ನು ಶುದ್ಧೀಕರಿಸಿ, ರಕ್ತನಾಳಗಳನ್ನು ಮೃದುಗೊಳ್ಳುವಂತೆ ಮಾಡುತ್ತದೆ. ಇದರಿಂದ ಅನಿರೀಕ್ಷಿತ ಸ್ಟ್ರೋಕ್ ಉಂಟಾಗುವಿಕೆಯಿಂದ ಪಾರಾಗಲು ಸಹಾಯಕವಾಗುತ್ತದೆ.
3.ಕುಂಬಳಕಾಯಿ ಬೀಜಗಳು ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಬಹಳ ಪರಿಣಾಮಕಾರಿ. ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಕುಂಬಳಕಾಯಿ ಬೀಜಗಳಿಂದ ಪರಿಹಾರದಂತೆ ಸೇವಿಸಬಹುದು.
4.ಕುಂಬಳಕಾಯಿ ಬೀಜ ಸೇವನೆಯಿಂದ ಉರಿಯೂತ ನಿವಾರಣೆ ಆಗಲಿದೆ. ಕೀಲು ನೋವು, ಸ್ನಾಯು ನೋವು ಮತ್ತು ಮೂಳೆ ನೋವಿನ ಸಮಸ್ಯೆಯನ್ನೂ ಕಡಿಮೆ ಮಾಡುತ್ತದೆ.
5.ಕುಂಬಳ ಬೀಜಗಳಲ್ಲಿ “ಚಿಲ್-ಔಟ್ ಖನಿಜ” ಎಂದು ಕರೆಯಲ್ಪಡುವ ಮೆಗ್ನೀಶಿಯo ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುವ ಶಕ್ತಿಯನ್ನು ಹೊಂದಿದ್ದು, ಮನಸ್ಥಿತಿ, ನಿದ್ರೆ ಮತ್ತು ಒತ್ತಡವನ್ನು ಸುಧಾರಿಸುತ್ತದೆ.
6.ಕುಂಬಳಕಾಯಿ ಬೀಜಗಳ ಸೇವೆನೆಯು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ದೇಹದಲ್ಲಿ ಹೆಚ್ಚುವರಿ ಕೊಬ್ಬನ್ನು ಶೇಖರಣೆ ಆಗದಂತೆ ಇದು ತಡೆಯುತ್ತದೆ ಎನ್ನುತ್ತಾರೆ ಆಹಾರ ತಜ್ಞರು.
7.ಕುಂಬಳಕಾಯಿ ಬೀಜದ ನಿಯಮಿತ ಸೇವನೆಯಿಂದ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ನ್ಯೂಟ್ರಿಷನ್ ರಿಸರ್ಚ್ ನಡೆಸಿದ ಅಧ್ಯಯನದ ಪ್ರಕಾರ, ಕುಂಬಳಕಾಯಿ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಂಡಿದ್ದ ಜನರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಆದ್ದರಿಂದ, ಇದು ಟೈಪ್ 2 ಮಧುಮೇಹ ಹೊಂದಿರುವ ಜನರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
8.ನಿದ್ರಾಹೀನತೆ ಸಮಸ್ಯೆಗೂ ಇದು ರಾಮ ಬಾಣವಾಗಿದೆ. ಕುಂಬಳಕಾಯಿ ಬೀಜದ ಪುಡಿಯನ್ನು ಕುದಿಸಿದ ಹಸುವಿನ ಹಾಲಿನ ಜೊತೆ ತೆಗೆದುಕೊಂಡು ಮಲಗಿದಾಗ ಒಳ್ಳೆಯ ನಿದ್ದೆ ನಮ್ಮ ಪಾಲಾಗುತ್ತದೆ.
9.ಮಹಿಳೆಯರಿಗೆ ಮಾಸಿಕ ಹೊಟ್ಟೆ ನೋವಿದ್ದಾಗ ಕುಂಬಳಕಾಯಿ ಬೀಜವನ್ನು ಸೇವಿಸುವುದು ಉತ್ತಮ. ಋತುಚಕ್ರ ಶುರುವಾಗಲು 14 ದಿನ ಇರಬೇಕಾದರೆ, ಕುಂಬಳಕಾಯಿ ಬೀಜ ಸೇವಿಸುತ್ತ ಬಂದರೆ ಕ್ರಮೇಣ ಹೊಟ್ಟೆ ನೋವು ಕಡಿಮೆಯಾಗುತ್ತದೆ.
10.ಜರ್ನಲ್ ಆಫ್ ಮೆಡಿಸಿನಲ್ ಫುಡ್ ನಲ್ಲಿ ಪ್ರಕಟವಾದ ಅಧ್ಯಯನವು ಕುಂಬಳಕಾಯಿ ಬೀಜದ ಸಾರವು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವ ಗುಣಲಕ್ಷಣಗಳನ್ನು ಹೊಂದಿದೆ ಎಂದು ಕಂಡು ಹಿಡಿದಿದೆ. ಇತರ ಅಧ್ಯಯನಗಳಲ್ಲಿಯೂ ಕೂಡ ಕುಂಬಳಕಾಯಿ ಬೀಜಗಳು ಕ್ಯಾನ್ಸರ್ ಮೇಲೆ ಸಕಾರಾತ್ಮಕ ಪರಿಣಾಮಗಳನ್ನು ಬೀರುತ್ತವೆ ಎಂಬ ಅಂಶವನ್ನು ಕಂಡು ಕೊಂಡಿವೆ.
ಸೂಪರ್ಫುಡ್ಗಳ ಪಟ್ಟಿಯಲ್ಲೂ ಸ್ಥಾನ ಪಡೆದ ಕುಂಬಳಕಾಯಿ ಬೀಜಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ, ಅವುಗಳನ್ನು ನಿಮ್ಮ ಆಹಾರದಲ್ಲಿ ಹೇಗೆ ಸೇರಿಸುವುದು ಎಂದು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ. ಈ ಬೀಜಗಳನ್ನು ನಮ್ಮ ಆಹಾರದ ಒಂದು ಭಾಗವನ್ನಾಗಿ ಮಾಡಲು ತಜ್ಞರು ಸೂಚಿಸಿದ ಕೆಲವು ಮಾರ್ಗಗಳು ಇಲ್ಲಿವೆ.
ಕುಂಬಳಕಾಯಿ ಬೀಜಗಳನ್ನು ಹಾಲಿನಲ್ಲಿ ಅಥವಾ ನೀರಿನಲ್ಲಿ ನೆನೆಸಿ ಸೇವಿಸಬಹುದು. ಒಣಗಿಸಿ ಪುಡಿ ರೂಪದಲ್ಲಿಯೂ ನೀರಿನಲ್ಲಿ ಬೆರೆಸಿ ಕುಡಿಯಬಹುದು. ಅಗಸೆ ಬೀಜಗಳು ಮತ್ತು ಚಿಯಾ ಬೀಜಗಳ ಪುಡಿಯೊಂದಿಗೆ ಬೆರೆಸಿಯೂ ತಿನ್ನಬಹುದು. ಇದರಿಂದ ಬೆನ್ನು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ. ಗ್ರೇವಿಗಳು ಮತ್ತು ಪಲ್ಯಗಳಲ್ಲಿ, ಉಪಾಹಾರದಲ್ಲಿ ಮತ್ತು ಬ್ರೆಡ್ ಗಳಿಂದ ತಯಾರಿಸಬಹುದಾದ ತಿಂಡಿಗಳಿಗೆ ಸೇರಿಸಬಹುದು. ಅವುಗಳನ್ನು ನೆನೆಸಿ ಅಥವಾ ಹುರಿದುಕೊಂಡು ಸೇವಿಸಬಹುದು. ಸ್ಮೂಥಿಗಳು ಮತ್ತು ಎನರ್ಜಿ ಬಾರ್ ಗಳಲ್ಲಿ ಸೇರಿಸಬಹುದು. ಇವುಗಳನ್ನು ಸಲಾಡ್ ಮತ್ತು ಸೂಪ್ ಗಳಿಗೂ ಸೇರಿಸಬಹುದು.
ಶ್ರೀಮತಿ ಸೌಮ್ಯಾಸನತ್ ✍️.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment