ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಆರೋಪಿ ಮೌಲ್ವಿ ವಾಸೀಂ ಪಠಾಣ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾನು ನಿರಪರಾಧಿ. ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಅಂತ ವಿಡಿಯೋ ಮಾಡಿ ಬಿಡುಗಡೆ ಮಾಡಿದ ನಾಲ್ಕೇ ಗಂಟೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿಯ ಇಂಡಿಪಂಪ್ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೆ 11 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣ ಮಾಸ್ಟರ್ ಮೈಂಡ್ ಎಂದೇ ಕರೆಯಲಾಗಿರುವ ಘಟನೆಯ ಪ್ರಮುಖ ರುವಾರಿ ಮೌಲ್ವಿ ವಾಸೀಂ ಪಠಾಣ್ ತಲೆ ಮರೆಸಿಕೊಂಡಿದ್ದ.
ಕೇವಲ ನಾಲ್ಕು ಗಂಟೆ ಹಿಂದೆ ಈತನ ವಿಡಿಯೋವೊಂದು ಬಿಡುಗಡೆ ಮಾಡಿ, ಅಂದು ತಾನು ಗಲಭೆ ನಡೆದ ಸ್ಥಳಕ್ಕೆ ಏಕೆ ಹೋಗಿದ್ದೆ ಎಂಬುದನ್ನು ಆರೋಪಿ ತಿಳಿಸಿದ್ದ. ಈ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು, ಆತನನ್ನು ವಶಕ್ಕೆ ಪಡೆದಿದ್ದಾರೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ