January 28, 2026

Newsnap Kannada

The World at your finger tips!

sudhakar1

ಡಾ.ಕೆ. ಸುಧಾಕರ್​ಗೆ ಭರ್ಜರಿ ಗೆಲುವು : ಶಾಸಕ ಪ್ರದೀಪ್ ಈಶ್ವರ್ ಗೆ ರಾಜೀನಾಮೆ ಒತ್ತಡ

Spread the love

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿ ಡಾ.ಕೆ. ಸುಧಾಕರ್​ ಕಾಂಗ್ರೆಸ್​ನ ರಕ್ಷಾ ರಾಮಯ್ಯ ಎದುರು 95,863 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಡಾ.ಕೆ. ಸುಧಾಕರ್ 4,99,570 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದು , ಕಾಂಗ್ರೆಸ್​ನ ರಕ್ಷಾ ರಾಮಯ್ಯ 4,03,707 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಈ ಮೂಲಕ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಎರಡನೇ ಗೆಲುವು ಸಿಕ್ಕಿದೆ.

ಇದನ್ನು ಓದಿ –ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು

ಸುಧಾಕರ್ ಗೆಲುವಿನ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್​ನ ಪ್ರದೀಪ್​ ಈಶ್ವರ್​ಗೆ ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ.

pradeep eshwar

ಚುನಾವಣೆ ಸಮಯದಲ್ಲಿ ಸುಧಾಕರ್‌ ವಿರುದ್ಧ ಸವಾಲೆಸೆದಿದ್ದ ಪ್ರದೀಪ್‌ ಈಶ್ವರ್‌, ಒಂದು ವೋಟ್‌ ಲೀಡ್‌ ಬಂದರೂ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು.ಮಂಡ್ಯದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು

ಇದೀಗ ಸುಧಾಕರ್‌ ಅವರು ಗೆಲುವು ಸಾಧಿಸಿದ್ದು, ಇಂದೇ ಪ್ರದೀಪ್‌ ಈಶ್ವರ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.

error: Content is protected !!