ಮಂಡ್ಯ – ಮೈಸೂರು ಜಿಲ್ಲೆಗಳಲ್ಲಿ ಈಗ ಗಂಡ – ಹೆಂಡತಿ ಇಬ್ಬರೂ ಜಿಲ್ಲಾಧಿಕಾರಿಗಳಾಗಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಡಾ. ಗೌತಮ್ ಬಗಾದಿ ಅವರನ್ನು ನೇಮಿಸಲಾಗಿದೆ.
ಗೌತಮ್ ಪತ್ನಿ ಅಶ್ವಥಿ ಮಂಡ್ಯದಲ್ಲಿ ಈಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಐಎಎಸ್ ಗಂಡ ಹೆಂಡ್ತಿಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೇ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿದೆ.
ಈ ಹಿಂದೆಯು ಶಿಖಾ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ, ಅವರ ಪತಿ ಅಜಯ್ ನಾಗಭೂಷಣ್ ಮಂಡ್ಯ ಜಿಲ್ಲಾಧಿಕಾರಿಯಾಗಿದ್ದರು.