ಮೈ ಮೇಲೆ ಹಾಕಿಕೊಂಡ ಚಿನ್ನಾಭರಣ, ಸರ ಕಿತ್ತುಕೊಂಡು ಹೋಗುವ ಈ ಕಾಲದಲ್ಲಿ ರಾಗಿ ಮೂಟೆಯಲ್ಲಿ ಸಿಕ್ಕ ಸುಮಾರು 70 ಗ್ರಾಂ ತೂಕದ ಚಿನ್ನಾಭರಣ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದಲ್ಲಿ ನಡೆದಿದೆ.
ನಾಗಮಂಗಲ ತಾಲೂಕಿನ ಕಲ್ಲಿನಾಥಪುರ ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನ ಹೆಚ್ಚಾಗುತ್ತಿದ್ದ ಹಿನ್ನೆಲೆ, ಈ ಗ್ರಾಮದ ಕಲ್ಲೇಗೌಡ ಎಂಬವರ ಪತ್ನಿ ಲಕ್ಕಮ್ಮ ಬೀರಿನಲ್ಲಿ ಇದ್ದ 70 ಗ್ರಾಂ ಒಡವೆಯನ್ನು ರಾಗಿ ಮೂಟೆಯಲ್ಲಿ ಇಟ್ಟು ಮಗನ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.
ಪತ್ನಿ ಬೆಂಗಳೂರಿಗೆ ಹೋದ ವೇಳೆ ಪತಿ ಕಲ್ಲೇಗೌಡ ಮನೆಯಲ್ಲಿ ಇದ್ದ ರಾಗಿ ಮೂಟೆಯಲ್ಲಿ ಚಿನ್ನ ಇರುವುದು ತಿಳಿಯದೇ ಮಾರಾಟ ಮಾಡಿದ್ದಾನೆ.
ರಾಗಿ ವ್ಯಾಪಾರಿಗಳು ಖರೀದಿ ಮಾಡಿದ ರಾಗಿಯನ್ನು ಬಸರಾಳಿನ ಬೋರೇಗೌಡ ಮತ್ತು ತಿಮ್ಮೇಗೌಡ ಎಂಬವರ ಶ್ರೀನಿವಾಸ ರೈಸ್ ಮಿಲ್ಗೆ ಮಾರಾಟ ಮಾಡಿದ್ದಾರೆ.
ಈ ರೈಸ್ ಮಿಲ್ಗೆ ಉತ್ತಮ ಗುಣಮಟ್ಟದ ರಾಗಿ ಬೇಕೆಂದು ಬೆಂಗಳೂರಿನಿಂದ ಬೇಡಿಕೆ ಬರುತ್ತದೆ. ಹೀಗಾಗಿ ತಮ್ಮ ಬಳಿ ಇದ್ದ ರಾಗಿ ಗುಣಮಟ್ಟ ಪರೀಕ್ಷಿಸಲು ಮೂಟೆಗಳಲ್ಲಿ ಇದ್ದ ರಾಗಿಯನ್ನು ಸುರಿದು ಪರಿಶೀಲನೆ ಮಾಡುವಾಗ ಒಂದು ಮೂಟೆಯಿಂದ ಬ್ಯಾಗ್ ಕೆಳಗೆ ಬಿದ್ದಿದೆ. ಇದನ್ನು ಕಂಡ ಕೆಲಸದ ಸಿಬ್ಬಂದಿ ಏನು ಅಂತಾ ನೋಡುವಾಗ ಬೋರೇಗೌಡ ಅಲ್ಲಿ ಒಡವೆ ಇರುವುದು ಕಂಡುಬಂದಿದೆ.
ಬಳಿಕ ಆ ಬ್ಯಾಗ್ ನಲ್ಲಿ ಇದ್ದ ಚಿನ್ನದಂಗಡಿಯ ಹೆಸರಿನ ಅಂಗಡಿ ಹೋಗಿ ಈ ಬಗ್ಗೆ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ನಿಜವಾದ ಮಾಲೀಕರಾದ ಕಲ್ಲೇಗೌಡ ಹಾಗೂ ಲಕ್ಕಮ್ಮ ಸಿಗುತ್ತಾರೆ. ನಂತರ ಅವರನ್ನು ಕರೆದು ಆಭರಣಗಳನ್ನು ನೀಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment