ಗಂಡನೊಬ್ಬ ಮೊದಲ ಪತ್ನಿಗೆ ಮೂರು ಜನ ಗಂಡು ಮಕ್ಕಳಿದ್ದರೂ ಸಹ ಎರಡನೇ ಹೆಂಡತಿಗೆ ಎರಡು ಹೆಣ್ಣು ಮಕ್ಕಳು ಹುಟ್ಟಿದ್ದಕ್ಕೆ ಆಕೆಗೆ ಮಾನಸಿಕ ಕಿರುಕುಳ ಕೊಟ್ಟಿದ್ದಾನೆ. ಗಂಡನ ಕಿರುಕುಳ ತಾಳಲಾರದ ಎರಡನೇ ಹೆಂಡತಿ ತನ್ನ ಎರಡು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಘಟಪ್ರಭಾ ನದಿಗೆ ಹಾರಿ ಪ್ರಾಣ ಬಿಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲೊಳಸೂರ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ಸಾವಿತ್ರಿ. ಆರೋಪಿ ಗಂಡನನ್ನು ರಾಜು ಬನಾಜ.
ರಾಜುವಿಗೆ ಈಗಾಗಲೇ ಮದುವೆಯಾಗಿತ್ತು, ಮೊದಲ ಹೆಂಡತಿಗೆ ಮೂರು ಮಕ್ಕಳು. ಈತ ನೀಡುತ್ತಿದ್ದ ಕಿರುಕುಳಕ್ಕೆ ಆಕೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದಳು.
ನಂತರ ರಾಜು ಬನಾಜ ಸಾವಿತ್ರಿಯನ್ನು ಮದುವೆಯಾದ. ಮೊದಲ ಹೆಂಡತಿಗೆ ಮೂರು ಗಂಡು ಮಕ್ಕಳಿರುವ ಕಾರಣ ಅವರ ಲಾಲನೆ ಪಾಲನೆ ಮಾಡೋಕೆ ಬೇಕು ಅಂತ ತನ್ನ ಸಹೋದರ ಸಂಬಂಧದಲ್ಲೆ ರಾಜು ಹಿರಿಯರನ್ನು ಒತ್ತಾಯಿಸಿ ಸಾವಿತ್ರಿ ಕೈ ಹಿಡಿದಿದ್ದ.
ಸಾವಿತ್ರಿ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದಳು. ಅಲ್ಲಿಂದ ವರಸೆ ಬದಲಿಸಿದ್ದ ರಾಜು, ಹೆಣ್ಣು ಮಕ್ಕಳನ್ನು ತಗೊಂಡು ನಾನೇನು ಮಾಡಲಿ ಅಂತ ಸಾವಿತ್ರಿಗೆ ಮಾನಸಿಕ ಕಿರುಕುಳ ನೀಡೋಕೆ ಶುರು ಮಾಡಿದ್ದ. ಅಲ್ಲದೆ ತವರು ಮನೆಯಿಂದ ಹಣ ತೆಗೆದುಕೊಂಡು ಬಾ ಅಂತ ಸಾವಿತ್ರಿಯನ್ನ ಪೀಡಿಸೋಕು ಶುರುಮಾಡಿದ್ದ.
ಹೀಗಾಗಿ ನನ್ನ ತಂಗಿ ತನ್ನ ಎರಡು ಮಕ್ಕಳನ್ನ ತೆಗೆದುಕೊಂಡು ಇಂತಹ ನಿರ್ಧಾರಕ್ಕೆ ಬಂದಿದ್ದಾಳೆ ಅಂತಾರೆ ಸಾವಿತ್ರಿ ಅಣ್ಣ ಭೀಮಶಿ. ಪೋಲಿಸರು ಪತಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment