ನಾನು ಸಹ ದಲಿತನೇ. ಕೇವಲ ಪರಿಶಿಷ್ಟ ಪಂಗಡದವರು ಮಾತ್ರ ದಲಿತರಲ್ಲ. ತುಳಿತಕ್ಕೊಳಗಾದ ಎಲ್ಲರೂ ದಲಿತರೇ.
ನಾನು ಸಹ ತುಳಿತಕ್ಕೆ ಒಳಗಾಗಿದ್ದೇನೆ. ಹಾಗಾಗಿ ನಾನು ಕೂಡ ದಲಿತನೇ. ದಲಿತರು ಸಿಎಂ ಆದರೆ ನನ್ನದು ಏನೂ ತಕರಾರು ಇಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು
ಮೈಸೂರಿನ ಹಿನಕಲ್ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಳ ಸಮುದಾಯ ಜನ ಜಾಗೃತರಾಗದಿದ್ದರೆ ಬದಲಾವಣೆ ಕಷ್ಟ ಎಂದರು
ದಲಿತರು ಸಿಎಂ ಆದ್ರೆ ನನ್ನದು ಏನು ತಕರಾರು ಇಲ್ಲ. ಕಾಂಗ್ರೆಸ್ ನಲ್ಲಿ ಯಾರು ಸಿಎಂ ಆಗಬೇಕು ಅನ್ನೋದನ್ನ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಶಾಸಕರು ಸೂಚಿಸಿದವರನ್ನು ಹೈಕಮಾಂಡ್ ಮುಖ್ಯಮಂತ್ರಿ ಅಂತಾ ಸೂಚಿಸುತ್ತಾರೆ. ಒಂದು ವೇಳೆ ದಲಿತರು ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ಕಾಂಗ್ರೆಸ್ ಪಕ್ಷ ಮೂರ್ನಾಲ್ಕು ರಾಜ್ಯಗಳಲ್ಲಿ ದಲಿತ ಸಿಎಂ ಮಾಡಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಮಾತ್ರ ದಲಿತ ಸಿಎಂ ಆಗಲು ಸಾಧ್ಯ ಎಂದರು