ಬೆಂಗಳೂರು: ನಮ್ಮ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಸಂಬಂಧ ಚೆನ್ನಾಗಿದೆ, ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಟಚ್ ಮಾಡಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ರಮೇಶ್ ಜಾರಕಿಹೊಳಿ, ನನ್ನ ಸಂಪರ್ಕದಲ್ಲಿ 16 ಮಂದಿ ಕಾಂಗ್ರೆಸ್ ಶಾಸಕರು ಮಾತ್ರವಲ್ಲ 3 ಮಂದಿ ಜೆಡಿಎಸ್ ನವರು ಇದ್ದಾರೆ. ಆದರೆ, ನಾನು ಜೆಡಿಎಸ್ ಟಚ್ ಮಾಡುವುದಿಲ್ಲ ಎಂದರು.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನನ್ನ ಆತ್ಮೀಯರು. ನಮ್ಮಿಬ್ಬರ ನಡುವಿನ ಸಂಬಂಧ ಚೆನ್ನಾಗಿದೆ. ಹೀಗಾಗಿ ಜೆಡಿಎಸ್ ಶಾಸಕರನ್ನು ಟಚ್ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ಹೈಕಮಾಂಡ್ ಒಪ್ಪಿಗೆ ನೀಡಿದರೆ 16 ಮಂದಿ ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬರ್ತೀನಿ. ಅಂದು ನಾವು ಸಿದ್ದರಾಮಯ್ಯ್ಗಗೆ ಬೇಕಿರಲಿಲ್ಲ. ಈಗ್ಯಾಕೆ ಬೇಕು ಕಾಂಗ್ರೆಸ್ಗೆ? ಮುಂದೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.