ಕೋವಿಡ್-19 ಹಿನ್ನೆಲೆ ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ಮೇಯರ್ ಅವಧಿ ವಿಸ್ತರಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸುತ್ತೇನೆ ಎಂದು ಮೇಯರ್ ತಸ್ನೀಂ ತಿಳಿಸಿದ್ದಾರೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದ ಕಾರಣ ಮೇಯರ್ ಆಗಿ ನಾನು ಅನೇಕ ಕೆಲಸಗಳನ್ನು ನೆರವೇರಿಸಲು ಆಗಿಲ್ಲ. ಅಲ್ಲದೆ ರಾಜ್ಯ ಸರ್ಕಾರ ಯಾವುದೇ ಅನುದಾನ ನೀಡಿಲ್ಲ. ನಗರ ಪಾಲಿಕೆಯಲ್ಲಿ ಆದಾಯವೂ ಬರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾಳೆ ಕಾರ್ಯಕ್ರಮಕ್ಕೆ ಮೈಸೂರಿಗೆ ಆಗಮಿಸುತ್ತಿರುವ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡುತ್ತೇನೆ. ನನ್ನ ಅವಧಿಯಲ್ಲಿ ಆಗಿರುವ ಕೆಲಸ ಕಾರ್ಯಗಳ ಬಗ್ಗೆ ಬೇಸರವಿದೆ. ಮೈತ್ರಿಯಲ್ಲಿದ್ದ ಕಾಂಗ್ರೆಸ್ ನವರು ಕೌನ್ಸಿಲ್ ನಲ್ಲಿ ಸಹಕಾರ ನೀಡಿಲ್ಲ ಎಂದು ಹೇಳಿದರು.