filmy

ನಾ ನಿನ್ನ ಮರೆಯಲಾರೆ !

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಡಾ ಎಂ ಲೀಲಾವತಿ ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಾ ನಿನ್ನ ಮರೆಯಲಾರೆ ಚಿತ್ರದಲ್ಲಿ ಚಿತ್ರದ ನಾಯಕಿಯ ತಾಯಿಯಾಗಿ ತನ್ನ ಮಗಳು ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೇ ಆಕೆಗೆ ಬೇರೆ ಮದುವೆ ಮಾಡಿ ತನ್ನ ಪ್ರತಾಪ ತೋರಿ ಮಗಳ ಪ್ರೇಮ ವಿವಾಹದ ಕನಸನ್ನು ನುಚ್ಚುನೂರು ಮಾಡಿ ತನ್ನ ಇಚ್ಛೆಯಂತೆ ವಿಜಯ ಸಾಧಿಸುವ ಪಾತ್ರ ಆ ಕಾಲದಲ್ಲಿ ಇಡೀ ಯುವ ಸಮೂಹವನ್ನೇ ರೊಚ್ಚಿಗೆಬ್ಬಿಸಿತ್ತು ಎಂದರೆ ಆ ಪಾತ್ರದಲ್ಲಿ ಡಾ ಲೀಲಾವತಿ ಅವರ ಪರಕಾಯ ಪ್ರವೇಶ ಹೇಗಿತ್ತು ? ಎಂಬುದಕ್ಕೆ ಸಾಕ್ಷಿ.

ನಾಗರ ‌ಹಾವು ಚಿತ್ರದಲ್ಲಿ ಮೇಷ್ಟ್ರ ಪತ್ನಿಯಾಗಿ, ಮೇಷ್ಟ್ರ ಅಚ್ಚುಮೆಚ್ಚಿನ ವಿದ್ಯಾರ್ಥಿಯನ್ನೇ ತನ್ನ ಮಗನನ್ನಾಗಿ ಕಂಡು ಮಕ್ಕಳಿಲ್ಲದ ತನ್ನ ಕೊರಗನ್ನು ಮುಚ್ಚಿಕೊಳ್ಳುವ ಆ ತಾಯಿಯ ಪಾತ್ರದ ಡಾ ಎಂ ಲೀಲಾವತಿ ಅವರ ಮನೋಜ್ಞ ಅಭಿನಯಕ್ಕೆ ಮನಸೋಲದವರೇ ಇಲ್ಲ !

ವೀರ ಕೇಸರಿ ಚಿತ್ರದಲ್ಲಿನ ಪ್ರಣಯ ಪಾತ್ರ, ಭಕ್ತ ಕುಂಬಾರ ಚಿತ್ರದ ಗೋರನ ಪತ್ನಿಯ ಪಾತ್ರ ಹಾಗೂ ಡಾ ಕೃಷ್ಣ ಚಿತ್ರದಲ್ಲಿ ತಾಯಿಯ ಪಾತ್ರಗಳಲ್ಲಿನ ಲೀಲಾವತಿ ಅವರ ಅತ್ಯದ್ಭುತ ಅಭಿನಯಕ್ಕೆ ಲೀಲಾವತಿ ಅವರೇ ಸಾಟಿ !

ಮದುವೆ ಮಾಡಿ ನೋಡು ಹಾಗೂ ಸಂತ ತುಕಾರಾಂ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಷ್ಟ್ರ ಪ್ರಶಸ್ತಿಗಳು ಲಭಿಸಿವೆ.

ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು ಹಾಗೂ ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಅಭಿನಯಕ್ಕೆ ಲೀಲಾವತಿ ಅವರಿಗೆ ರಾಜ್ಯ ಪ್ರಶಸ್ತಿಗಳು ಸಂದಿವೆ.

ಕೆಲವೇ ಕ್ಷಣಗಳಲ್ಲಿ ಹಿರಿಯ ನಟಿಯ ಬೃಹತ್ ಸಾಧನೆಯನ್ನು ಪರಿಚಯಿಸಲಿರುವ ಈ ಸಾಕ್ಷ್ಯಚಿತ್ರ ಡಾ ಲೀಲಾವತಿ ಅವರಿಗೆ ಅರ್ಪಿಸಬಹುದಾದ ಶ್ರದ್ಧಾಂಜಲಿ.ಸ್ಯಾಂಡಲ್‌ವುಡ್‌ ಹಿರಿಯ ನಟಿ ಲೀಲಾವತಿ ಇನ್ನಿಲ್ಲ

Team Newsnap
Leave a Comment

Recent Posts

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024