ನಾನು ಯಾವ ಮಹಿಳೆಯನ್ನೂ ರೇಪ್ ಮಾಡಿಲ್ಲ. ಆದರೆ 2003 ಮಹಿಳೆಯೊಬ್ಬರ ಸಹೋದರಿ ಜೊತೆ ಸಂಬಂಧ ಇಟ್ಟುಕೊಂಡಿದ್ದೇನೆ. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ನಮ್ಮ ಕುಟುಂಬ ದವರೂ ಒಪ್ಪಿಕೊಂಡಿದ್ದಾರೆ.
ನಂಗೆ ಮಹಿಳೆಯ ಸಹೋದರಿ ಜತೆ 2003ರಿಂದಲೂ ಸಂಬಂಧ ಹೊಂದಿರುವುದಾಗಿ ಸಚಿವರು ಒಪ್ಪಿಕೊಂಡಿದ್ದಾರೆ.
ಸಚಿವ ಧನಂಜಯ ಮುಂಡೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಕಾರ
38 ವರ್ಷದ ಮಹಿಳೆ ಮತ್ತು ಆಕೆಯ ಸಹೋದರಿ ಬ್ಲ್ಯಾಕ್ಮೇಲ್ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಮತ್ತು ನನ್ನಿಂದ ಹಣವನ್ನು ಸುಲಿಗೆ ಮಾಡಿದ್ದಾರೆಂದು ಪ್ರತ್ಯಾರೋಪ ಮಾಡಿದ್ದಾರೆ.
ಈ ಕುರಿತಂತೆ ತಾನು ಸಹ 2020ರ ನವೆಂಬರ್ನಲ್ಲಿ ಪೊಲೀಸ್ ರಿಗೆ ದೂರು ನೀಡಿರುವುದಾಗಿ ಹೇಳಿದ್ದಾರೆ.
ಮಹಿಳೆಯೊಂದಿಗೆ ಸಂಬಂಧ ಇರುವುದನ್ನು ಧನಂಜಯ್ ಮುಂಡೆ ಒಪ್ಪಿಕೊಂಡ ಬೆನ್ನಲ್ಲೇ ಮಹಾರಾಷ್ಟ್ರ ಬಿಜೆಪಿ ಮಹಿಳಾ ವಿಭಾಗ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದು ಸಂಪುಟದಿಂದ ಧನಂಜಯ್ರನ್ನು ಕೈ ಬಿಡುವಂತೆ ಒತ್ತಾಯಿಸಿದೆ.
ಜನವರಿ 11ರಂದು ಗಾಯಕಿ ರೇಣು ಶರ್ಮಾ ತನ್ನ ವಕೀಲರೊಂದಿಗೆ ಅಂಧೇರಿಯ ಒಶಿವರಾ ಪೊಲೀಸ್ ಠಾಣೆಗೆ ಆಗಮಿಸಿ ಧನಂಜಯ್ ಮುಂಡೆ ವಿರುದ್ಧ ರೇಪ್ ದೂರು ದಾಖಲಿಸಿದ್ದರು.
1997ರಿಂದಲೂ ನನಗೆ ಧನಂಜಯ್ ಪರಿಚಯವಿದೆ. ಮದುವೆ ಯಾಗುವುದಾಗಿ ಮತ್ತು ಬಾಲಿವುಡ್ನಲ್ಲಿ ಗಾಯಕಿಯಾಗಲು ಸಹಾಯ ಮಾಡುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ರೇಣು ಪರ ವಕೀಲ ರಮೇಶ್ ತ್ರಿಪಾಠಿ ಎಂಬುವರು ಮಾತನಾಡಿ ದೂರು ದಾಖಲಾದ ದಿನದಿಂದ ಈವರೆಗೂ ಎಫ್ಐಆರ್ ದಾಖಲು ಮಾಡಿಲ್ಲ ಎಂದು ಆರೋಪಿಸಿದ್ದಾರೆ.
2008ರಲ್ಲಿ ಮೊದಲ ಬಾರಿಗೆ ಧನಂಜಯ್ ಮುಂಡೆ ರೇಪ್ ಮಾಡಿದ್ದಾರೆ. ಮನೆಯಲ್ಲಿ ರೇಣು ಒಂಟಿಯಾಗಿರುವಾಗ ರೇಪ್ ಮಾಡಿ, ವಿಡಿಯೋ ಮಾಡಿಕೊಂಡಿದ್ದಾರೆ. ಅಲ್ಲಿಂದಾಚೆಗೆ ಅನೇಕ ಬಾರಿ ಕೃತ್ಯವೆಸಗಿದ್ದಾರೆ. 2019ರಲ್ಲಿ ಮದುವೆಯಾಗಲು ನಿರಾಕರಿಸಿದರು. ಏನಾದರೂ ಬಹಿರಂಗಪಡಿಸಿದರೆ, ವಿಡಿಯೋ ಸೋರಿಕೆ ಮಾಡುವುದಾಗಿ ಹೆದರಿಸುತ್ತಿದ್ದಾರೆಂದು ದೂರು ದಾಖಲಿಸಲಾಗಿದೆ.
ಎಫ್ಐಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ರೇಣುಗೆ ಏನಾದರೂ ಆದರೆ ನ್ಯಾಯಾಲಯ ಮೆಟ್ಟಿಲೇರುತ್ತೇವೆ. ಮುಂದಾಗುವುದಕ್ಕೆಲ್ಲ ಧನಂಜಯ್ ಅವರೇ ನೇರ ಹೊಣೆ ಎಂದು ವಕೀಲ ರಮೇಶ್ ತ್ರಿಪಾಠಿ ಹೇಳಿದ್ದಾರೆ.
ಜ. 11ರಂದು ದೂರಿನ ಪ್ರತಿಯನ್ನು ಶೇರ್ ಮಾಡಿ ಟ್ವೀಟ್ ಮಾಡಿರುವ ರೇಣು ಶರ್ಮಾ, ನಾನು ಸಚಿವ ಧನಂಜಯ್ ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ದಾಖಲಿಸಿದ್ದೇನೆ. ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮಹಾರಾಷ್ಟ್ರ ಪೊಲೀಸರು ನನ್ನ ದೂರಿನ ಬಗ್ಗೆ ನಿರಾಸಕ್ತಿ ತೋರಿದ್ದಾರೆ ಎಂದು ಆರೋಪಿಸಿ ನನ್ನ ಜೀವ ಅಪಾಯದಲ್ಲಿದೆ ಸಹಾಯ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪತ್ನಿ ಮಮತಾರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರಿಗೂ ಟ್ಯಾಗ್ ಮಾಡಿದ್ದಾರೆ.
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
This website uses cookies.
Leave a Comment