ಸಂತೋಷ್ ಯಾರೆಂಬುದೇ ಗೊತ್ತಿಲ್ಲ – ಈಶ್ವರಪ್ಪ : 14 ಲಕ್ಷರು ಲಂಚ ನೀಡಿದ್ದೇನೆ -ಸಂತೋಷ್

Team Newsnap
2 Min Read

ಸಂತೋಷ್ ಪಾಟೀಲ್ ಯಾರೂ ಎಂಬುದು ಗೊತ್ತಿಲ್ಲ, ಯಾವತ್ತೂ ನೋಡಿರಲಿಲ್ಲ. ನನ್ನ ಮೇಲೆ ಕಮೀಷನ್‌ ಆರೋಪ ಮಾಡಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಕೋರ್ಟ್‍ನಿಂದ ಲೀಗಲ್‌ ನೋಟಿಸ್ ಬಂದಿತ್ತು. ಆ ನೋಟಿಸ್‍ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಎಂದು ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ. ನನಗೆ ಯಾಕೆ ಶಿಕ್ಷೆ ಆಗ್ಬೇಕು? ಶಿಕ್ಷೆ ಆಗುವಂತಹ ತಪ್ಪನ್ನು ನಾನು ಮಾಡಿಲ್ಲ ಎಂದರು

14 ಲಕ್ಷರು ಕಮೀಷನ್ ಕೊಟ್ಟಿದ್ದೆ :

ನಾನು 14 ಲಕ್ಷ ರೂ. ಹಣವನ್ನು ಈಶ್ವರಪ್ಪನವರಿಗೆ ತಲುಪಿಸಿದ್ದೆ. ಆದರೂ ಬಿಲ್‌ ಪಾವತಿ ಆಗಿಲ್ಲ. ಹೀಗಾಗಿ ಸಾಯುವುದು ಮಾತ್ರ ಬಾಕಿ ಎಂದು ಸಂತೋಷ್‌ ಪಾಟೀಲ್‌ ಈ ಹಿಂದೆ ತಿಳಿಸಿದ್ದರು.

ಮಾರ್ಚ್‌ 9 ರಂದು ದೆಹಲಿ ಭೇಟಿ ವೇಳೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಂತೋಷ್ ಅವರು ನಾನು ಮೋದಿಯ ಪರಮ ಭಕ್ತ. ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನಾನು ಕೆಲಸ ಮಾಡಿದ್ದೇನೆ. ಗ್ರಾಮಗಳ ಅಭಿವೃದ್ಧಿ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಆದರೆ ಕಾಮಗಾರಿ ಮಾಡಿದರೂ ಬಿಲ್‌ ಪಾವತಿ ಇನ್ನೂ ಮಾಡಿಲ್ಲ. ಹೀಗೆ ಆದರೆ ನಾನು ಸಾಯುವುದೇ ಲೇಸು. ಈ ಕಾರಣಕ್ಕೆ ನಾನು ದೆಹಲಿಯಲ್ಲಿರುವ ಬಿಜೆಪಿ ನಾಯಕರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿದ್ದರು.

ಈಶ್ವರಪ್ಪ ಅವರಿಂದ ನಂಬಿಕೆ ದ್ರೋಹ ಆರೋಪವನ್ನು ಸಂತೋಷ್‌ ಮಾಡಿದ್ದರು. ಹಿಂಡಲಗಾದಲ್ಲಿ ವರ್ಕ್ ಆರ್ಡರ್ ಇಲ್ಲದೇ ಸಂತೋಷ್ ಕಾಮಗಾರಿ ಮಾಡಿದ್ದರು. ಈಶ್ವರಪ್ಪರಿಂದ ಮೌಕಿಕ ಆದೇಶ ಪಡೆದು 4 ಕೋಟಿ ರಸ್ತೆ ನಿರ್ಮಿಸಿದ್ದರು. ಕಾಮಗಾರಿ ಮುಗಿಸಿ ಬಿಲ್ ಪಡೆಯಲು ಕಾಮಗಾರಿ ಆದೇಶದ ಪ್ರತಿ ಮುಖ್ಯವಾಗುತ್ತದೆ . ಅದೇ ಇಲ್ಲದೆ ಕಾಮಗಾರಿ ಮಾಡಿದ್ದೆ ಎಂದರು

ಆದರೂ ಕಾಮಗಾರಿ ಅಂತ್ಯವಾದ ಬಳಿಕ ವರ್ಕ್ ಆರ್ಡರ್‌ ನೀಡುವಂತೆ ಸಂತೋಷ್‌ ಈಶ್ವರಪ್ಪ ಬಳಿ ಮನವಿ ಮಾಡಿದ್ದರು. ಆದರೆ ವರ್ಕ್ ಆರ್ಡರ್ ಬಿಡುಗಡೆ ಆಗಿರಲ್ಲ. ಬಿಲ್ ಸಹ ಸರ್ಕಾರದಿಂದ ಬಿಡುಗಡೆ ಆಗಿರಲ್ಲ.

ಬಿಲ್ ಬಿಡುಗಡೆಗೆ ಪಿಎಗಳ ಮೂಲಕ ಶೇ 40 ಕಮಿಷನ್‍ಗೆ ಈಶ್ವರಪ್ಪ ಬೇಡಿಕೆ ಇಟ್ಟಿದ್ದರು. ಈಗಾಗಲೇ 14 ಲಕ್ಷ ರು ಹಣವನ್ನು ಲಂಚವಾಗಿ ನೀಡಿದ್ದೇನೆ. 4 ಕೋಟಿ ರೂ.ಗೆ ಬಡ್ಡಿ ಕಟ್ಟುತ್ತಿದ್ದೇನೆ. ಬಿಲ್ ಬಿಡುಗಡೆಯಾಗದಿದ್ದರೇ ವಿಷ ಸೇವಿಸುತ್ತೇನೆ. ಆತ್ಮಹತ್ಯೆ ಬಿಟ್ಟು ಬೇರೆ ಯಾವುದೇ ದಾರಿ ಇಲ್ಲ. ಕೇಂದ್ರ ನಾಯಕರನ್ನು ಭೇಟಿಯಾಗಲು ಬಂದಿದ್ದೇನೆ. ಪರಿಹಾರ ಸಿಗದಿದ್ದರೇ ಸಾವೊಂದೇ ದಾರಿ ಎಂದು ಸಂತೋಷ್‌ ಹೇಳಿದ್ದರು.

Share This Article
Leave a comment