ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ. ನನಗೆ ಯಾಕೆ ಶಿಕ್ಷೆ ಆಗ್ಬೇಕು? ಶಿಕ್ಷೆ ಆಗುವಂತಹ ತಪ್ಪನ್ನು ನಾನು ಮಾಡಿಲ್ಲ ಎಂದರು
ನಾನು 14 ಲಕ್ಷ ರೂ. ಹಣವನ್ನು ಈಶ್ವರಪ್ಪನವರಿಗೆ ತಲುಪಿಸಿದ್ದೆ. ಆದರೂ ಬಿಲ್ ಪಾವತಿ ಆಗಿಲ್ಲ. ಹೀಗಾಗಿ ಸಾಯುವುದು ಮಾತ್ರ ಬಾಕಿ ಎಂದು ಸಂತೋಷ್ ಪಾಟೀಲ್ ಈ ಹಿಂದೆ ತಿಳಿಸಿದ್ದರು.
ಮಾರ್ಚ್ 9 ರಂದು ದೆಹಲಿ ಭೇಟಿ ವೇಳೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಂತೋಷ್ ಅವರು ನಾನು ಮೋದಿಯ ಪರಮ ಭಕ್ತ. ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನಾನು ಕೆಲಸ ಮಾಡಿದ್ದೇನೆ. ಗ್ರಾಮಗಳ ಅಭಿವೃದ್ಧಿ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಆದರೆ ಕಾಮಗಾರಿ ಮಾಡಿದರೂ ಬಿಲ್ ಪಾವತಿ ಇನ್ನೂ ಮಾಡಿಲ್ಲ. ಹೀಗೆ ಆದರೆ ನಾನು ಸಾಯುವುದೇ ಲೇಸು. ಈ ಕಾರಣಕ್ಕೆ ನಾನು ದೆಹಲಿಯಲ್ಲಿರುವ ಬಿಜೆಪಿ ನಾಯಕರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿದ್ದರು.
ಈಶ್ವರಪ್ಪ ಅವರಿಂದ ನಂಬಿಕೆ ದ್ರೋಹ ಆರೋಪವನ್ನು ಸಂತೋಷ್ ಮಾಡಿದ್ದರು. ಹಿಂಡಲಗಾದಲ್ಲಿ ವರ್ಕ್ ಆರ್ಡರ್ ಇಲ್ಲದೇ ಸಂತೋಷ್ ಕಾಮಗಾರಿ ಮಾಡಿದ್ದರು. ಈಶ್ವರಪ್ಪರಿಂದ ಮೌಕಿಕ ಆದೇಶ ಪಡೆದು 4 ಕೋಟಿ ರಸ್ತೆ ನಿರ್ಮಿಸಿದ್ದರು. ಕಾಮಗಾರಿ ಮುಗಿಸಿ ಬಿಲ್ ಪಡೆಯಲು ಕಾಮಗಾರಿ ಆದೇಶದ ಪ್ರತಿ ಮುಖ್ಯವಾಗುತ್ತದೆ . ಅದೇ ಇಲ್ಲದೆ ಕಾಮಗಾರಿ ಮಾಡಿದ್ದೆ ಎಂದರು
ಆದರೂ ಕಾಮಗಾರಿ ಅಂತ್ಯವಾದ ಬಳಿಕ ವರ್ಕ್ ಆರ್ಡರ್ ನೀಡುವಂತೆ ಸಂತೋಷ್ ಈಶ್ವರಪ್ಪ ಬಳಿ ಮನವಿ ಮಾಡಿದ್ದರು. ಆದರೆ ವರ್ಕ್ ಆರ್ಡರ್ ಬಿಡುಗಡೆ ಆಗಿರಲ್ಲ. ಬಿಲ್ ಸಹ ಸರ್ಕಾರದಿಂದ ಬಿಡುಗಡೆ ಆಗಿರಲ್ಲ.
ಬಿಲ್ ಬಿಡುಗಡೆಗೆ ಪಿಎಗಳ ಮೂಲಕ ಶೇ 40 ಕಮಿಷನ್ಗೆ ಈಶ್ವರಪ್ಪ ಬೇಡಿಕೆ ಇಟ್ಟಿದ್ದರು. ಈಗಾಗಲೇ 14 ಲಕ್ಷ ರು ಹಣವನ್ನು ಲಂಚವಾಗಿ ನೀಡಿದ್ದೇನೆ. 4 ಕೋಟಿ ರೂ.ಗೆ ಬಡ್ಡಿ ಕಟ್ಟುತ್ತಿದ್ದೇನೆ. ಬಿಲ್ ಬಿಡುಗಡೆಯಾಗದಿದ್ದರೇ ವಿಷ ಸೇವಿಸುತ್ತೇನೆ. ಆತ್ಮಹತ್ಯೆ ಬಿಟ್ಟು ಬೇರೆ ಯಾವುದೇ ದಾರಿ ಇಲ್ಲ. ಕೇಂದ್ರ ನಾಯಕರನ್ನು ಭೇಟಿಯಾಗಲು ಬಂದಿದ್ದೇನೆ. ಪರಿಹಾರ ಸಿಗದಿದ್ದರೇ ಸಾವೊಂದೇ ದಾರಿ ಎಂದು ಸಂತೋಷ್ ಹೇಳಿದ್ದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment