ಪೂರ್ತಿ ಬದುಕಿಗಾಗುವಷ್ಟು ಕಷ್ಟಗಳನ್ನೆದುರಿಸಿದ್ದೇನೆ,ಇಡೀ ದೇಹದಲ್ಲಿರುವ ನೀರು ಹಿಂಗುವಂತೆ ಕಣ್ಣೀರಾಗಿದ್ದೇನೆ,
ಏಳು ತಲೆಮಾರಿಗಾಗುವಷ್ಟು ಅವಮಾನಿತನಾಗಿದ್ದೇನೆ,
ಹಲವಾರು ಸಲ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಶೋಷಣೆಗೊಳಗಾಗಿದ್ದೇನೆ, ಈ ಬದುಕು ಸಾಕೆನಿಸುವಷ್ಡು ನೊಂದಿದ್ದೇನೆ,
ಜೀವನದಲ್ಲಿ ಮತ್ತೆಂದೂ ಮೇಲೇರಲು ಸಾಧ್ಯವಾಗದಷ್ಟು ಸೋತಿದ್ದೇನೆ,
ಸಮಾಜದ ಯಾರೂ ಗಮನಿಸದಷ್ಟು ಅಲಕ್ಷಿತನಾಗಿದ್ದೇನೆ,
ಇಲ್ಲಿಯವರೆಗೂ ಗಳಿಸಿದ್ದೆಲ್ಲವನ್ನೂ ಕಳೆದುಕೊಂಡಿದ್ದೇನೆ,
ಅನಾಥಪ್ರಜ್ಙೆ ಹಗಲಿರುಳು ಕಾಡುತ್ತಾ ಬಸವಳಿದಿದ್ದೇನೆ,
ಆದರೂ,…………..
ಬದುಕನ್ನು ಎದುರಿಸುತ್ತಿದ್ದೇನೆ :
ಈ ಕ್ಷಣಕ್ಕೂ ನಗು ನಗುತಲಿದ್ದೇನೆ,
ಮತ್ತೆ ಮತ್ತೆ ಮನದಲ್ಲಿ ಸುಂದರ ಭವಿಷ್ಯದ ಕನಸು ಕಾಣುತ್ತಿದ್ದೇನೆ,
ನಾನೀಗ ಎಲ್ಲದರಿಂದ ಮುಕ್ತ, ಸಂತೃಪ್ತ, ನಿರ್ಲಿಪ್ತ,
ಬದುಕೇನು ಭಾರವಲ್ಲ, ಅನುಭವಿಸಿ:
ಜೀವನ ಒಂದು ಅದ್ಬುತ ಮೈದಾನ ಹೊಂದಿದ ಪಾಠಶಾಲೆ – ನೆನಪಿರಲಿ,
ಓದಿ, ಬರೆಯಿರಿ, ಪ್ರವಾಸ ಮಾಡಿ,
ಸಾಧ್ಯವಾಗದಿದ್ದರೆ ಆಟವಾಡಿ.
ಮತ್ತೆಲ್ಲವೂ ನಿಮ್ಮದಾಗುತ್ತದೆ.ಇದು ಬಹುತೇಕ ಸತ್ಯ ಮತ್ತು ವಾಸ್ತವ.
ಇದರಲ್ಲಿ ನಿಮ್ಮೊಂದಿಗೆ ನಾನು.
- ವಿವೇಕಾನಂದ. ಹೆಚ್.ಕೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ