‘ನಾನು 8 ಕೋಟಿರು ವಂಚಿಸಿಲ್ಲ’ ಕಾಂಗ್ರೆಸ್ ಕಾರ್ಯಕರ್ತರ ಆರೋಪಕ್ಕೆ ರಮ್ಯಾ ಕೆಂಡ

Team Newsnap
1 Min Read

ನಟಿ ರಮ್ಯಾ ವಿರುದ್ಧ ಕಾಂಗ್ರೆಸ್ ಹಲವು ಕಾರ್ಯಕರ್ತರು, ನಾಯಕರೇ 8 ಕೋಟಿ ರೂಪಾಯಿ ವಂಚಿಸಿ ಕಾಂಗ್ರೆಸ್ ಬಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇದನ್ನು ಓದಿ : ರಮ್ಯಾ ನೀವು ಎಷ್ಟು ದಿನ ಎಲ್ಲಿದ್ದಿರಿ ? KPCC ಸೋಷಿಯಲ್ ಮೀಡಿಯಾ ಮುಖ್ಯಸ್ಥ ನಾಯ್ಡು ಪ್ರಶ್ನೆ

ಈ ಆರೋಪದಿಂದ ತೀವ್ರ ನೊಂದಿರುವ ರಮ್ಯಾ, ಈ ಆರೋಪ ಹೊತ್ತು ನನ್ನ ಮುಂದಿನ ಬದುಕು ನಡೆಸುವಂತೆ ಆಗಬಾರದು ಅಂತಾ ಅವರು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಮ್ಯಾ, ನಾನು ಕಾಂಗ್ರೆಸ್‌ನ ತ್ಯಜಿಸಿದ ನಂತರ ‘ಅವಳು 8 ಕೋಟಿ ಕಾಂಗ್ರೆಸ್‌ಗೆ ವಂಚಿಸಿದಳು ಮತ್ತು ಓಡಿಹೋದಳು’ ಎಂಬ ಸುದ್ದಿಯನ್ನು ಹಲವು ವಾಹಿನಿಗಳಲ್ಲಿ ಸುದ್ದಿ ಮಾಡಿದ್ದಾರೆ.

ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಲಾಯಿತು. ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ರು ವಂಚನೆ ಮಾಡಿಲ್ಲ. ಮೌನವಾಗಿರುವುದೇ ನನ್ನ ತಪ್ಪಾ ? . ಕೆ.ಸಿ. ವೇಣುಗೋಪಾಲ್ ಅವರಿಗೆ ವಿನಮ್ರ ವಿನಂತಿ. ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ದಯವಿಟ್ಟು ಈ ಕನ್ನಡ ಮಾಧ್ಯಮಗಳಿಗೆ ಸ್ಪಷ್ಟಪಡಿಸಿ. ಕನಿಷ್ಠ ಪಕ್ಷ ನೀವು ನನಗಾಗಿ ಇದೊಂದು ಕೆಲಸ ಮಾಡಿ ಎಂದಿದ್ದಾರೆ.

ಇದನ್ನು ಓದಿ : ಕಾಂಗ್ರೆಸ್ ನವರು ಒಂದಾಗಿ ಚುನಾವಣೆ ಎದುರಿಸಬೇಕು -ಡಿಕೆಶಿ ಗೆ ರಮ್ಯಾ ಪಾಠ

ನಾನು ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‌ನೊಂದಿಗೆ ಬದುಕಬೇಕಾಗಿಲ್ಲ ಎಂದು ರಮ್ಯಾ ವಿನಂತಿಸಿಕೊಂಡಿದ್ದಾರೆ.

Share This Article
Leave a comment