ನಟಿ ರಮ್ಯಾ ವಿರುದ್ಧ ಕಾಂಗ್ರೆಸ್ ಹಲವು ಕಾರ್ಯಕರ್ತರು, ನಾಯಕರೇ 8 ಕೋಟಿ ರೂಪಾಯಿ ವಂಚಿಸಿ ಕಾಂಗ್ರೆಸ್ ಬಿಟ್ಟಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಇದನ್ನು ಓದಿ : ರಮ್ಯಾ ನೀವು ಎಷ್ಟು ದಿನ ಎಲ್ಲಿದ್ದಿರಿ ? KPCC ಸೋಷಿಯಲ್ ಮೀಡಿಯಾ ಮುಖ್ಯಸ್ಥ ನಾಯ್ಡು ಪ್ರಶ್ನೆ
ಈ ಆರೋಪದಿಂದ ತೀವ್ರ ನೊಂದಿರುವ ರಮ್ಯಾ, ಈ ಆರೋಪ ಹೊತ್ತು ನನ್ನ ಮುಂದಿನ ಬದುಕು ನಡೆಸುವಂತೆ ಆಗಬಾರದು ಅಂತಾ ಅವರು ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಮ್ಯಾ, ನಾನು ಕಾಂಗ್ರೆಸ್ನ ತ್ಯಜಿಸಿದ ನಂತರ ‘ಅವಳು 8 ಕೋಟಿ ಕಾಂಗ್ರೆಸ್ಗೆ ವಂಚಿಸಿದಳು ಮತ್ತು ಓಡಿಹೋದಳು’ ಎಂಬ ಸುದ್ದಿಯನ್ನು ಹಲವು ವಾಹಿನಿಗಳಲ್ಲಿ ಸುದ್ದಿ ಮಾಡಿದ್ದಾರೆ.
ನನ್ನ ವಿಶ್ವಾಸಾರ್ಹತೆಯನ್ನು ನಾಶಮಾಡುವ ಪ್ರಯತ್ನ ಮಾಡಲಾಯಿತು. ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದೇನೆ. ನಾನು ಪಕ್ಷಕ್ಕೆ 8 ಕೋಟಿ ರು ವಂಚನೆ ಮಾಡಿಲ್ಲ. ಮೌನವಾಗಿರುವುದೇ ನನ್ನ ತಪ್ಪಾ ? . ಕೆ.ಸಿ. ವೇಣುಗೋಪಾಲ್ ಅವರಿಗೆ ವಿನಮ್ರ ವಿನಂತಿ. ನೀವು ಮುಂದೆ ಕರ್ನಾಟಕಕ್ಕೆ ಬಂದಾಗ ದಯವಿಟ್ಟು ಈ ಕನ್ನಡ ಮಾಧ್ಯಮಗಳಿಗೆ ಸ್ಪಷ್ಟಪಡಿಸಿ. ಕನಿಷ್ಠ ಪಕ್ಷ ನೀವು ನನಗಾಗಿ ಇದೊಂದು ಕೆಲಸ ಮಾಡಿ ಎಂದಿದ್ದಾರೆ.
ಇದನ್ನು ಓದಿ : ಕಾಂಗ್ರೆಸ್ ನವರು ಒಂದಾಗಿ ಚುನಾವಣೆ ಎದುರಿಸಬೇಕು -ಡಿಕೆಶಿ ಗೆ ರಮ್ಯಾ ಪಾಠ
ನಾನು ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್ನೊಂದಿಗೆ ಬದುಕಬೇಕಾಗಿಲ್ಲ ಎಂದು ರಮ್ಯಾ ವಿನಂತಿಸಿಕೊಂಡಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು