ನಾನು ಇಲ್ಲಿಯವರೆಗೆ ಗೋಮಾಂಸ ತಿಂದಿಲ್ಲ. ಆದ್ರೆ ತಿನ್ನಬೇಕು ಅನ್ಸಿದ್ರೆ ತಿಂತಿನಿ ಅದನ್ನ ಕೇಳೋಕೆ ಇವರು (ಬಿಜೆಪಿ) ಯಾರು? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಗೋಮಾಂಸ ತಿನ್ನೋದೆ ಸಾಧನೆ ಅಂತ ಹೇಳಿದ್ದಾರೆ. ನಾನೇನು ಅವರ ಥರ ಸೊಪ್ಪು ತಿನ್ನಲೇ. ನಾನು ಸೊಪ್ಪು ಬೇಕು ಅಂದ್ರೆ ಸೊಪ್ಪು ತಿಂತಿನಿ. ಮಾಂಸ ಬೇಕು ಅಂದ್ರೆ ಮಾಂಸ ತಿಂತಿನಿ ಎಂದು ತಿರುಗೇಟು ನೀಡಿದರು.
ನಾನೇನಾದ್ರು ಅವರಿಗೆ ಹೇಳಿದ್ದೀನಾ ಮಾಂಸ ತಿನ್ನು ಎಂದು. ಮತ್ತೆ ಸುಮ್ಮನೆ ತಿನ್ನೋರಿಗೆ ಯಾಕೇ ಪ್ರಶ್ನೆ. ಜಗತ್ತಿನಲ್ಲಿ ಮಾಂಸಹಾರಿಗಳೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂದರು.
ನನ್ನ ಆಹಾರ ನನ್ನ ಹಕ್ಕು.ಅದನ್ನ ಪ್ರಶ್ನಿಸೋಕೆ ಇವರು ಯಾರು? ಯಡಿಯೂರಪ್ಪಗೆ ಗೊತ್ತಿಲ್ಲ ಹೇಳ್ತಿನಿ ಕೇಳಿ. I am making it very clear ನಾನು ಈವರೆಗೆ ಗೋಮಾಂಸ ತಿಂದಿಲ್ಲ. ನಾನು ಹಂದಿ ಮಾಂಸ ತಿಂದಿಲ್ಲ. ಆದ್ರೆ ತಿನ್ನಬೇಕು ಅನ್ನಿಸಿದ್ರೆ ತಿನ್ನುತ್ತೀನಿ. ನಾನು ತಿಂದಿರೋದು ಕೋಳಿ ಮಾಂಸ, ಕುರಿಮಾಂಸ, ಆಡಿನ ಮಾಂಸ ಮಾತ್ರ. ಆದ್ರೆ ನಮ್ಮ ಆಹಾರ ಪದ್ದತಿ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ ಎಂದು ಟಾಂಗ್ ನೀಡಿದರು.
ನಿಮಗೆ ಸೊಪ್ಪು ಇಷ್ಟ ಇದ್ರೆ ತಿನ್ನಿ. ಬೇರೆಯವರಿಗೆ ಏನು ಇಷ್ಟ ಇದೆ ಅದನ್ನ ತಿನ್ನೋಕೆ ಬಿಡಿ ಎಂದು ಸಿಎಂ ಯಡಿಯೂರಪ್ಪ ಅವರ ವಿರುದ್ದ ಕಿಡಿ ಕಾರಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು