ಭವಿಷ್ಯದ ಜೀವನದಲ್ಲಿ ನಾನು ಹೇಗೆ ಇರಬೇಕು ಎಂಬ ಪಾಠವನ್ನು ಜೈಲಿನಲ್ಲಿದ್ದ ಸಮಯದಲ್ಲಿ ಕಲಿತಿರುವುದಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿಕೊಂಡಿದ್ದಾರೆ.
ಧಾರವಾಡ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪದಡಿ 9 ತಿಂಗಳಿಂದ ಜೈಲುವಾಸಿಯಾಗಿದ್ದ ವಿನಯ್ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಂದು ಬಿಡುಗಡೆಯಾಗುತ್ತಿದ್ದಂತೆ ವರದಿಗಾರರೊಂದಿಗೆ ಮಾತನಾಡಿದರು.
ಪುಸ್ತಕ ಓದುವ ಅಭ್ಯಾಸವೇ ನನಗೆ ಇರಲಿಲ್ಲ. ಕಾರಾಗೃಹದಲ್ಲಿದ್ದ ವೇಳೆ ಪುಸ್ತಕ ಓದುವುದನ್ನು ರೂಢಿಸಿಕೊಂಡೆ. ಈ ಅವಧಿಯಲ್ಲಿ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ ಎಂದರು.
ಉಳಿದ ರಾಜಕಾರಣಿಗಳಂತಲ್ಲ. ನಾನೇ ಬೇರೆ. ನಾನೊಬ್ಬ ರೈತ. ಶೀಘ್ರದಲ್ಲೇ ಈ ಆರೋಪದಿಂದ ಹೊರಬರುವ ವಿಶ್ವಾಸವಿದೆ ಎಂದು ಮಾಜಿ ಸಚಿವರು ನುಡಿದರು.
ತಾವು ನಿರಪರಾಧಿ ಎಂದು ಹೇಳಿಕೊಂಡ ವಿನಯ್ ಕುಲಕರ್ಣಿ, ತಮ್ಮ ಮೇಲೆ ಭರವಸೆಯಿಟ್ಟು ಸುಪ್ರೀಂಕೋರ್ಟ್ ಜಾಮೀನು ನೀಡಿರುವುದಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ