ನಾನು ಜೆಡಿಎಸ್ ಗೆ ಸೇರುತ್ತೇನೆ, ಯಾವತ್ತು ಎಂಬುದು ಗೊತ್ತಿಲ್ಲ. ದಿನಾಂಕ ಇನ್ನೂ ನಿಗದಿಯಾಗಿಲ್ಲ. ಶೀಘ್ರದಲ್ಲಿಯೇ ದಿನಾಂಕ ತಿಳಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು ಗುಣ ಅಂದರೆ ಯಾವತ್ತೂ ಡ್ಯಾಮ್ಗೆ ಡ್ಯಾಮೇಜ್ ಮಾಡಲ್ಲ. ಅಲ್ಲಿ ನೀರು ಸೋರುತ್ತಿದ್ದರೆ ಬಕೆಟ್ ಹಿಡಿತಾರೆ. ಸೋರಿ ಹೋಗುವ ನೀರಿನಲ್ಲೇ ಬಕೆಟ್ ತುಂಬಿಸಿಕೊಳ್ತಾರೆ ಎಂದರು.
ಯಾವುದೇ ವಿವಾದ ಸೃಷ್ಟಿ ಮಾಡಿದರೂ ಸಕ್ಸಸ್ ಆಗುತ್ತಿಲ್ಲ. ಗೋಹತ್ಯೆ, ಧಾರ್ಮಿಕ ಬಿಲ್ ತಂದರು. ಅದು ಅಲ್ಲೇ ನಿಂತಿದೆ. ಈಗ ಹಿಜಬ್ ವಿವಾದ ತಂದಿದ್ದಾರೆ. ಹಿಜಬ್ ಅನಾದಿಕಾಲದಿಂದಲೂ ಇದೆ. ಮೈಸೂರು ಮಹಾರಾಜರು ಅಂದಿನ ಶಾಲಾ ಕಾಲೇಜಿಗೆ ಹೆಣ್ಣುಮಕ್ಕಳು ಹೋಗುವ ಗಾಡಿಗೆ ಪರದೆ ಹಾಕಿದ್ದರು. ಹೆಣ್ಣು ಮಕ್ಕಳಿಗೆ ಪರದೆ ಅಲ್ಲದೆ ಗಾಡಿಗೂ ಪರದೆ ಹಾಕಿದ್ದರು.
ಈಗ ಉತ್ತರ ಕರ್ನಾಟಕದಲ್ಲಿ ತಲೆ ಮೇಲೆ ಸೆರಗು ಹಾಕದ ಹೆಣ್ಣು ಮಕ್ಕಳು ಸಿಗಲ್ಲ. ಅದು ಅವರ ಸಂಸ್ಕೃತಿಯಾಗಿದೆ. ತಲೆ ಮೇಲೆ ಬಟ್ಟೆ ಹಾಕೋದು ಹಿಜಬ್, ಅದು ಬುರ್ಕ ಅಲ್ಲಾ. ಅಯ್ಯೋ ಹುಚ್ಚಮುಂಡೇವ ಕೋವಿಡ್ಗೆ ಹಾಕುವುದನ್ನೆ ಇವರು ಹಾಕಿದ್ದಾರೆ. ಬೊಮ್ಮಾಯಿನೇ ಹಿಜಬ್ ಹಾಕಿದ್ದಾನೆ, ಸಚಿವರು ಹಾಕಿದ್ದಾರೆ, ನಾನು ಹಾಕಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.
ಹೆಣ್ಣು ಮಕ್ಕಳು ಮುಖಮುಚ್ಚಿಕೊಂಡರೆ ನಿಮಗೇನು ಸಮಸ್ಯೆ. ಮುಖ ನೋಡೋ ಆನಂದ ನಿಮಗ್ಯಾಕೆ. ಅವರು ಬ್ಯೂಟ್ ಕಂಟೆಸ್ಟ್ಗೆ ಬರುತ್ತಿಲ್ಲ. ಕೆಲವರು ಮುಸ್ಲಿಂ ಹೆಣ್ಣುಮಕ್ಕಳು ಹಿಜಬ್ ಹಾಕಲ್ಲ. ಅವರಿಗೆ ಹಾಕಿ ಅಂತ ಒತ್ತಾಯ ಮಾಡಲ್ಲ. ಹಾಕುವವರನ್ನ ಯಾಕೆ ತಡೆಯುತ್ತೀರಾ ಎಂದು ಸರ್ಕಾರವನ್ನು ಪ್ರಶ್ನೆ ಮಾಡಿದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment