ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುವೆ : ಸಚಿವ ಮಾಧುಸ್ವಾಮಿ

Team Newsnap
0 Min Read

ಖಾತೆ ಬದಲಾವಣೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ ಮತ್ತು ಪರಿಸರ ಖಾತೆಗೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವ ಸಚಿವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದಾರೆ.

ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯ ಪತ್ರ ಕಳುಹಿಸುತ್ತೇನೆ. ಅದನ್ನು ಅಂಗೀಕರಿಸೋದು, ಬಿಡೋದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.

Share This Article
Leave a comment