ಖಾತೆ ಬದಲಾವಣೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರವಾಸೋದ್ಯಮ ಮತ್ತು ಪರಿಸರ ಖಾತೆಗೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವ ಸಚಿವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದಾರೆ.
ನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯ ಪತ್ರ ಕಳುಹಿಸುತ್ತೇನೆ. ಅದನ್ನು ಅಂಗೀಕರಿಸೋದು, ಬಿಡೋದು ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.