Main News

ಕಡಿಮೆ ಅಂಕ ಗಳಿಸಿದ ಮಕ್ಕಳು ಖಿನ್ನರಾಗಬೇಕಿಲ್ಲ – ಐಎಎಸ್‌ ಅಧಿಕಾರಿ ತುಷಾರ್ ಡಿ ಸುಮೇರಾ

ಕಡಿಮೆ ಅಂಕ ಗಳಿಸಿದ ಮಕ್ಕಳು ಖಿನ್ನರಾಗಬೇಕಿಲ್ಲ, ಅವಕಾಶಗಳು ಇನ್ನೂ ಮುಗಿದಿಲ್ಲ ಎಂಬ ಸಂದೇಶ ನೀಡಲು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬಲು ಐಎಎಸ್​ ಅಧಿಕಾರಿಯೊಬ್ಬರು 10ನೇ ತರಗತಿಯ ಅಂಕಪಟ್ಟಿಯೊಂದನ್ನು ಶೇರ್​ ಮಾಡಿಕೊಂಡಿದ್ದಾರೆ.

ಇದನ್ನು ಓದಿ –ಲೈಟರ್ ವಿಚಾರ– ಮಹಿಳೆ ಜುಟ್ಟು ಎಳೆದಾಡಿ, ಪತಿ ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಪುಂಡರು

ಪರೀಕ್ಷಾ ಫಲಿತಾಂಶಗಳಿಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರು ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಹಂಚಿಕೊಂಡಿದ್ದು, ಅವರು ಇಂಗ್ಲಿಷ್‌ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕಗಳನ್ನು ಪಡೆದಿದ್ದಾರೆ.

ಶಿಕ್ಷಣ ವ್ಯವಸ್ಥೆಯಲ್ಲಿ ಜ್ಞಾನಕ್ಕಿಂತ ಅಂಕಗಳಿಗೆ ಹೆಚ್ಚಿನ ಮಹತ್ವ ಕೊಡುವುದರಿಂದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಏನು ಅರಿಯದ ವಿದ್ಯಾರ್ಥಿಗಳ ಮನಸ್ಸಲ್ಲಿ ಅಂಕಗಳ ತಾರತಮ್ಯ ಮಾನಸಿಕವಾಗಿ ಕುಗ್ಗಿಸಿ ಬಿಡುತ್ತದೆ. ಮಕ್ಕಳನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಪಾಲಕರು ಕೂಡ ಎಡವಿದ್ದಾರೆ.

ಛತ್ತೀಸ್‌ಗಢ ಕೇಡರ್‌ನ 2009 ರ ಬ್ಯಾಚ್ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಅಂಕಪಟ್ಟಿಯೊಂದಿಗೆ ತುಷಾರ್‌ ಅವರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ತಮ್ಮ ಅಂಕಪಟ್ಟಿ ಹಂಚಿಕೊಂಡ ಭರೂಚ್ ಕಲೆಕ್ಟರ್ ತುಷಾರ್ ಸುಮೇರಾ ಅವರು, 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಕೇವಲ ಪಾಸ್‌ ಮಾರ್ಕ್‌ ಗಳಿಸಿ ಉತ್ತೀರ್ಣರಾಗಿದ್ದಾರೆ ಎಂದು ಹೇಳಿದ್ದಾರೆ. ಅವರು ಇಂಗ್ಲಿಷ್ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕ ಮಾತ್ರ ಪಡೆದಿದ್ದಾರೆ” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

2012 ರಲ್ಲಿ ಐಎಎಸ್ ಅಧಿಕಾರಿಯಾದ ತುಷಾರ್ ಸುಮೇರಾ ಅವರು ಆರ್ಟ್ಸ್ ಸ್ಟ್ರೀಮ್‌ನಲ್ಲಿ ಪದವಿ ಪೂರ್ಣಗೊಳಿಸಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೊದಲು ಶಾಲಾ ಶಿಕ್ಷಕರಾಗಿಯೂ ಅವರು ಕೆಲಸ ಮಾಡಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024