ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಇಂದು ಸಿ. ಎಂ .ಇಬ್ರಾಹಿಂ ಅಧಿಕಾರ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಕಲೇಶಪುರ ಶಾಸಕ ಎಚ್ ಕೆ ಕುಮಾರಸ್ವಾಮಿ ಹೇಳಿದ್ದಾರೆ.
ನೂತನ ಅಧ್ಯಕ್ಷರಾಗಿ ಸಿ ಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿ ಜೆಡಿಎಸ್ ಬಲಪಡಿಸುವ ಹೊಣೆ ಹೊರಲಿದ್ದಾರೆ . ಪಕ್ಷಕ್ಕೆ ಹೊಸ ರೂಪ ಮತ್ತು ಹುರುಪು ತರಲು ಜೆಡಿಎಸ್ ಅಧಿಪತಿಗಳು ಮೊದಲ ಹೆಜ್ಜೆ ಇಟ್ಟಿದ್ದಾರೆ . ಈ ಹಿಂದೆಯೂ ಕೂಡ ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ನಿರ್ಗಮಿತ ಆಧ್ಯಕ್ಷ , ಶಾಸಕ ಕುಮಾರಸ್ವಾಮಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದರು.
ಈ ಸಂಬಂಧ ಈಗಾಗಲೇ ಪಕ್ಷದ ಮುಖಂಡರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರು ನನ್ನ ಜೊತೆ ಮಾತನಾಡಿದ್ದಾರೆ, ಪಕ್ಷದ ಅಭಿವೃದ್ಧಿಗೆ ಸಹಕರಿಸಿದರೆ ಯಾವುದೇ ತ್ಯಾಗಕ್ಕೂ ಸಿದ್ಧ ಎಂದರು.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನನ್ನ ಕ್ಷೇತ್ರದತ್ತ ಗಮನ ಹರಿಸಬೇಕು, ಇಬ್ರಾಹಿಂ ಅವರಿಗೆ ಸಹಕಾರ ನೀಡುತ್ತೇನೆ ಎಂದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ