ಉಡುಪಿಯ ಆ ಆರು ವಿದ್ಯಾರ್ಥಿನಿಯರು ಹಠ ಮಾಡದೇ ಕಾಲೇಜಿಗೆ ಬರಬೇಕು.
ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಉಡುಪಿಯ ಶಾಸಕ ರಘುಪತಿ ಭಟ್ ಹೇಳಿದರು
ಹಿಜಾಬ್ ಕುರಿತಂತೆ ಹೈಕೋರ್ಟ್ ತೀರ್ಪು ಬಳಿಕ ಬೆಂಗಳೂರಿನ ಶಾಸಕರ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಘುಪತಿ ಭಟ್ ಅವರು, ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ ಮತ್ತು ಸಂತೋಷ ವ್ಯಕ್ತಪಡಿಸುತ್ತೇನೆ. ತ್ರೀ-ಸದಸ್ಯ ಪೀಟದ ತೀರ್ಪನ್ನು ಎಲ್ಲರೂ ಪಾಲಿಸಬೇಕು ಹೇಳಿದರು
ತ್ರಿ ಸದಸ್ಯ ಪೀಠ ವಿಚಾರಣೆ ಮಾಡಿ ತೀರ್ಪು ನೀಡಿದೆ. ತ್ರಿ ಸದಸ್ಯ ಪೀಠದಲ್ಲಿ ಮುಸ್ಲಿಂ ನ್ಯಾಯಾಧೀಶರೂ ಇದ್ದರು. ಇದು ಐತಿಹಾಸಿಕ ತೀರ್ಪು ಆಗಿದೆ. ಸುಪ್ರೀಂಕೋರ್ಟ್ ಗೆ ಹೋಗಲು ಅವಕಾಶ ಇದೆ. ಆದರೆ ದೇಶ ಮಟ್ಟದಲ್ಲಿ ಮತ್ತೆ ಈ ವಿಚಾರ ತೆಗೆದುಕೊಂಡು ಹೋಗಿ ಹಿಂದೂ-ಮುಸ್ಲಿಂರ ಮಧ್ಯೆ ಕಂದಕ ಮೂಡಿಸಬಾರದು ಎಂದಿದ್ದಾರೆ.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ