2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ.
ಈ ವಿಷಯವನ್ನು ಗದಗನಲ್ಲಿ ಸುದ್ದಿಗಾರರಿಗೆ ತಿಳಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೆವೆ ,ಎಂದು ಚುನಾವಣೆಗೂ ಮುನ್ನ ಬಂಪರ್ ಗಿಪ್ಟ್ ಆಫರ್ ನೀಡುವ ಮೂಲಕ ಮಹಿಳೆಯರ ಮತಕ್ಕೆ ಶ್ರೀರಾಮುಲು ಕಣ್ಣು ಹಾಕಿರುವ ಸುಳಿವು ನೀಡಿದರು.
ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು. ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ ಬಳಕೆ ಮಾಡುವದು ಏನೂ ಇಲ್ಲ. ಎಲ್ಲವೂ ಭವಿಷ್ಯದ ನಿಧಿ ಸಲುವಾಗಿ ಕೊಟ್ಟಿದ್ದು ಎಂದರು
ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ವಿಚಾರಕ್ಕೆ ವ್ಯಂಗ್ಯವಾಡಿ, ಕಾಂಗ್ರೆಸ್ ಹಿಂದುಳಿದ ಜಾತಿಗಳ ಆಧಾರದ ಮೇಲೆ ರಾಜಕಾರಣ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಪಂಚರಾಜ್ಯ ಚುನಾವಣೆ ನೋಡಿದರೆ ಗೊತ್ತಾಗುತ್ತೆ, ಕಾಂಗ್ರೆಸ್ ದೂಳಿಪಟ ಆಗಿದೆ. ಕಾಂಗ್ರೆಸ್ ಪಕ್ಷ ಈಗ ಪಾರ್ಟ್ ಟೈಮ್ ಪಾರ್ಟಿ ಆಗಿ ಉಳಿದಿದೆ ಎಂದು ಲೇವಡಿ ಮಾಡಿದರು.
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ