ನಟ ದುನಿಯಾ ವಿಜಯ್ ಬಂದು ಆಶೀರ್ವಾದ ಮಾಡದ ಹೊರತು ನಾನು ಮದುವೆ ಆಗುವುದಿಲ್ಲ ಎಂದು ದಾವಣಗೆರೆಯ ಯುವತಿಯೊಬ್ಬಳು ಪಟ್ಟು ಹಿಡಿದ ಪ್ರಸಂಗ ಜರುಗಿದೆ
ಸಾಮಾನ್ಯವಾಗಿ ಮದುವೆಗೆ ಸಂಬಂಧಿಕರು, ಅಣ್ಣಂದಿರು ಬಾರದಿದ್ದರೆ ಮದುವೆಯಾಗುವುದಿಲ್ಲ.ಬಂದು ಅಕ್ಷತೆ ಹಾಕಿದರೆ ಮಾತ್ರ ಮದುವೆ ಆಗುತ್ತೇನೆ ಎನ್ನುತ್ತಾರೆ
ಆದರೆ ದಾವಣಗೆರೆಯಲ್ಲಿ ಯುವತಿಯೊಬ್ಬಳು ತನ್ನ ಮೆಚ್ಚಿನ ನಟ ದುನಿಯಾ ವಿಜಯ್ ತನ್ನ ಮದುವೆಗೆ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದರೆ ಮಾತ್ರ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.
ದಾವಣಗೆರೆ ರಾಮನಗರ ಬಡಾವಣೆಯ ಶಿವಾನಂದ ಅವರ ಮಗಳು ಅನುಷಾ ಮದುವೆ ನವೆಂಬರ್ 29ಕ್ಕೆ ನಡೆಯಲಿದೆ.
ನಟ ದುನಿಯಾ ವಿಜಿ ಮದುವೆಗೆ ಬಂದು ಆಶೀರ್ವಾದ ಮಾಡದಿದ್ದರೆ ತಾಳಿಯೇ ಕಟ್ಟಿಸಿಕೊಳ್ಳುವುದಿಲ್ಲ ಎಂದು ಹಠ ಹಿಡಿದಿದ್ದಾಳೆ. ಅಲ್ಲದೆ ಒಂಟಿ ಸಲಗ ಎಂದು ಹಚ್ಚೆ ಹಾಕಿಸಿಕೊಂಡಿರುವ ಅನುಷಾ, ಲಗ್ನ ಪತ್ರಿಕೆಯಲ್ಲಿ ಕೂಡ ದುನಿಯಾ ವಿಜಯ್ ಅವರ ಪೋಟೋ ಹಾಕಿಸಿಕೊಂಡಿದ್ದಾರೆ. ಮದುವೆಗೆ ದುನಿಯಾ ವಿಜಯ್ ಬಾರದಿದ್ದರೆ ಮದುವೆಯಾಗುವುದಿಲ್ಲ ಎಂದು ಅನುಷಾ ಪಟ್ಟು ಹಿಡಿದಿದ್ದಾಳೆ.
ಅನುಷಾ ಕುಟುಂಬಸ್ಥರು ಎಲ್ಲರೂ ದುನಿಯಾ ವಿಜಯ್ ಅಭಿಮಾನಿಗಳು. , ಕಳೆದ ಐದು ವರ್ಷದ ಹಿಂದೆ ಅನುಷಾ ತಂದೆ ಶಿವಾನಂದ್ ಮನೆ ಕಟ್ಟಿಸಿ ಅದಕ್ಕೆ ದುನಿಯಾ ಋಣ ಎಂದು ಹೆಸರಿಟ್ಟಿದ್ದರು. ಅಲ್ಲದೆ ದುನಿಯಾ ವಿಜಯ್ ಬರುವವರೆಗೂ ಮನೆ ಓಪನಿಂಗ್ ಮಾಡುವುದಿಲ್ಲ ಎಂದು ಹಾಗೇಯೇ ಬಿಟ್ಟಿದ್ದರು. ಈ ವಿಚಾರ ತಿಳಿದು ವಿಜಯ್ ದಾವಣಗೆರೆಗೆ ಆಗಮಿಸಿ ಅಭಿಮಾನಿಯ ಗೃಹ ಪ್ರವೇಶ ಮಾಡಿದ್ದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment