ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ ನಂತರ ನನ್ನನ್ನು ನರೇಂದ್ರ ಮೋದಿ ಚಮಚಾ ಎನ್ನುತ್ತಿದ್ದಾರೆ. ಸತ್ಯವನ್ನು ಒಪ್ಪಿಕೊಳ್ಳಲು ಕಷ್ಟವಾದವರು ಈ ರೀತಿ ಮಾತನಾಡುವುದು ಸಹಜ ಎಂದಿದ್ದಾರೆ ನಟ ಪ್ರಕಾಶ್ ಬೆಳವಾಡಿ.
ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರದೇ ಇದ್ದರೆ ಸಿನಿಮಾ ಬಿಡುಗಡೆಯೇ ಆಗುತ್ತಿರಲಿಲ್ಲ ಎಂದರು ಪ್ರಕಾಶ್ ಬೆಳವಾಡಿ.
ಮೈಸೂರಿನಲ್ಲಿ ಗುರುವಾರ ‘ಮೈಸೂರು ಸಿನಿಮಾ ಸೊಸೈಟಿ’ ಏರ್ಪಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಆ ಚಿತ್ರದಲ್ಲಿ ನಟಿಸಿರುವ ನಟ ಪ್ರಕಾಶ್ ಬೆಳವಾಡಿ ಮಾತನಾಡಿದರು.
ಈ ಸಿನಿಮಾ ಅಪಪ್ರಚಾರಕ್ಕೆ ಬಳಕೆ ಆಗುತ್ತಿದೆ. ಜಾತಿರಾಜಕಾರಣಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ ಎಂದು ಮಾತನಾಡುತ್ತಿದ್ದಾರೆ. ಸಿನಿಮಾ ಇರುವುದೇ ಸತ್ಯ ಹೇಳುವುದಕ್ಕೆ. ಈ ಸಿನಿಮಾ ಸತ್ಯವನ್ನೇ ಹೇಳಿದೆ ಅಷ್ಟೆ ಎಂದರು.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಮತ್ತು ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ತಮ್ಮನ್ನು ನರೇಂದ್ರ ಮೋದಿ ಅವರ ಚಮಚಾ ಎಂದು ಕರೆಯುತ್ತಿರುವ ವಿಷಯವನ್ನೂ ಅವರು ಹೇಳಿಕೊಂಡರು. ಕೆಲವು ವಿಷಯಗಳನ್ನು ಮೋದಿ ಅವರನ್ನು ಬೆಂಬಲಿಸಿದ್ದು ನಿಜ ಎಂದು ಪ್ರಕಾಶ್ ಬೆಳವಾಡಿ ಒಪ್ಪಿಕೊಂಡರು. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನು ಸತ್ಯದ ಪರ ಇರುವುದಾಗಿ ಅವರು ಸ್ಪಷ್ಟ ಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್