ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ ನಂತರ ನನ್ನನ್ನು ನರೇಂದ್ರ ಮೋದಿ ಚಮಚಾ ಎನ್ನುತ್ತಿದ್ದಾರೆ. ಸತ್ಯವನ್ನು ಒಪ್ಪಿಕೊಳ್ಳಲು ಕಷ್ಟವಾದವರು ಈ ರೀತಿ ಮಾತನಾಡುವುದು ಸಹಜ ಎಂದಿದ್ದಾರೆ ನಟ ಪ್ರಕಾಶ್ ಬೆಳವಾಡಿ.
ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರದೇ ಇದ್ದರೆ ಸಿನಿಮಾ ಬಿಡುಗಡೆಯೇ ಆಗುತ್ತಿರಲಿಲ್ಲ ಎಂದರು ಪ್ರಕಾಶ್ ಬೆಳವಾಡಿ.
ಮೈಸೂರಿನಲ್ಲಿ ಗುರುವಾರ ‘ಮೈಸೂರು ಸಿನಿಮಾ ಸೊಸೈಟಿ’ ಏರ್ಪಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಆ ಚಿತ್ರದಲ್ಲಿ ನಟಿಸಿರುವ ನಟ ಪ್ರಕಾಶ್ ಬೆಳವಾಡಿ ಮಾತನಾಡಿದರು.
ಈ ಸಿನಿಮಾ ಅಪಪ್ರಚಾರಕ್ಕೆ ಬಳಕೆ ಆಗುತ್ತಿದೆ. ಜಾತಿರಾಜಕಾರಣಕ್ಕೆ ಕಾರಣವಾಗಿದೆ. ಧರ್ಮಗಳ ನಡುವೆ ದ್ವೇಷ ಬಿತ್ತುತ್ತಿದೆ ಎಂದು ಮಾತನಾಡುತ್ತಿದ್ದಾರೆ. ಸಿನಿಮಾ ಇರುವುದೇ ಸತ್ಯ ಹೇಳುವುದಕ್ಕೆ. ಈ ಸಿನಿಮಾ ಸತ್ಯವನ್ನೇ ಹೇಳಿದೆ ಅಷ್ಟೆ ಎಂದರು.
ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಮತ್ತು ಆ ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ತಮ್ಮನ್ನು ನರೇಂದ್ರ ಮೋದಿ ಅವರ ಚಮಚಾ ಎಂದು ಕರೆಯುತ್ತಿರುವ ವಿಷಯವನ್ನೂ ಅವರು ಹೇಳಿಕೊಂಡರು. ಕೆಲವು ವಿಷಯಗಳನ್ನು ಮೋದಿ ಅವರನ್ನು ಬೆಂಬಲಿಸಿದ್ದು ನಿಜ ಎಂದು ಪ್ರಕಾಶ್ ಬೆಳವಾಡಿ ಒಪ್ಪಿಕೊಂಡರು. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನು ಸತ್ಯದ ಪರ ಇರುವುದಾಗಿ ಅವರು ಸ್ಪಷ್ಟ ಪಡಿಸಿದರು.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
More Stories
ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
ಅಂತರ್ ರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ ನಿಧನ
ಹಿನ್ನೆಲೆ ಗಾಯಕಿ ಸಂಗೀತಾ ಇನ್ನಿಲ್ಲ: ಗಾಯನಕ್ಕೆ ಮನಸೋತು ಚಿನ್ನದ ಸರ ಕೊಟ್ಟಿದ್ದ ಜಯಲಲಿತಾ