ಮಂಡ್ಯ ಜಿಲ್ಲೆಯಲ್ಲಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿ ತೊಂದರೆ ಉಂಟಾಗಬಾರದು. ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜ ಅಥವಾ ಕಲಬೆರೆಕೆ ರಸಗೊಬ್ಬರ ವಿತರಣೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಗೋಪಾಲಯ್ಯ ಜಿಲ್ಲೆಯಿಂದ ಹೊರ ಜಿಲ್ಲೆ ಅಥವಾ ಹೊರ ರಾಜ್ಯಕ್ಕೆ ಅಕ್ರಮವಾಗಿ ರಸಗೊಬ್ಬರ ಸಾಗಾಣಿಕೆಯಾಗಬಾರದು. ಈ ರೀತಿಯ ಪ್ರಕರಣಗಳು ಕಂಡುಬಂದರೆ ದಾಳಿ ನಡೆಸಿ ವಶ ಪಡಿಸಿಕೊಂಡು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಎಂದರು.
ಬಿತ್ತನೆ ಬೀಜ ಅಥವಾ ರಸಗೊಬ್ಬರದ ಅವಶ್ಯಕತೆಯನ್ನು ಪರಿಶೀಲಿಸಿಕೊಳ್ಳಿ ಕೊರತೆ ಇದ್ದಲ್ಲಿ ಗಮನಕ್ಕೆ ತಂದರೆ ಕೃಷಿ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಬೇಡಿಕೆ ತಕ್ಕಂತೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಒದಗಿಸುವುದಾಗಿ ತಿಳಿಸಿದರು.
ವಿ ಸಿ ನಾಲೆಗೆ ತಕ್ಷಣ ನೀರು ಬಿಡಿ :
ವಿ.ಸಿ.ನಾಲೆಯಿಂದ 15 ದಿನಗಳಿಂದ ನೀರು ಬಿಡುಗಡೆ ಮಾಡದೇ ರೈತರ ಬೆಳೆಗಳಿಗೆ ತೊಂದರೆಯಾಗುತ್ತಿದೆ ಎಂದು ಶಾಸಕರು ಹಾಗೂ ಸಂಸದರು ಸಚಿವರಿಗೆ ತಿಳಿಸಿದಾಗ ನೀರು ನಿಲುಗಡೆಗೂ ಮುನ್ನ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ವಿ.ಸಿ.ನಾಲೆ ಕಾರ್ಯಪಾಲಕ ಅಭಿಯಂತರರಿಗೆ ತಿಳಿಸುತ್ತಾ ತಕ್ಷಣವೇ ನೀರು ಬಿಡುಗಡೆ ಮಾಡಿ ವರದಿ ನೀಡುವಂತೆ ತಿಳಿಸಿದರು.
ಶಾಲಾ ಕಾಲೇಜು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ, ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್, ವಿಧಾನ ಸಭೆಯ ಸದಸ್ಯರುಗಳಾದ ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್, ಡಿ. ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಜಿ.ಪಂ ನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿ.ರಾಮ್ ಪ್ರಸಾಥ್ ಮನೋಹರ್, ಜಿಲ್ಲಾಧಿಕಾರಿಗಳಾದ ಎಸ್.ಅಶ್ವತಿ, ಜಿ.ಪಂ. ಸಿಇಒ ದಿವ್ಯ ಪ್ರಭು, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment