Main News

ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ – ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ

ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ ಎನ್ನುವ ಸಂಚಲನ ಮೂಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಯು ಮಾಜಿ ಸಚಿವ ಯೋಗೇಶ್ವರ್ ಕುರಿತಾಗಿ ಇರಬಹುದೇ ಎಂಬ ಚಚೆ೯ ನಡೆಯುತ್ತಿದೆ.

ಬಿಜೆಪಿಗೆ ಗುಡ್ ಬೈ ಹೇಳಲು ತುದಿಗಾಲಿನಲ್ಲಿ ನಿಂತಿರುವ ಮಾಜಿ ಸಚಿವ ಯೋಗೇಶ್ವರ್ ಕಾಂಗ್ರೆಸ್ ಸೇರಲು ತಯಾರಿ ಮಾಡುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿಗಳು ಲಭ್ಯವಾಗುತ್ತಿದೆ

ಡಿಕೆಶಿ ಹಾಗೂ ಡಿ.ಕೆ.ಸುರೇಶ್​ ಸಿ.ಪಿ.ಯೋಗೇಶ್ವರ್​​ ಅವರನ್ನು ಭೇಟಿಯಾಗಿದ್ದಾರಂತೆ. ಈ ಬಗ್ಗೆ ಮಾತುಕತೆ ಕೂಡ ನಡೆದಿದೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್​ ಸೇರಲು ಖುದ್ದು ಸಿಪಿ ಯೋಗೇಶ್ವರ್ ಅವರೇ ಉತ್ಸುಕರಾಗಿದ್ದಾರೆ. ಬಿಜೆಪಿಯಲ್ಲಿನ ಇತ್ತೀಚೆಗಿನ ಬೆಳವಣಿಗೆಗಳಿಂದ ಬೇಸರಗೊಂಡು ಕಾಂಗ್ರೆಸ್ ಸೇರಲಿದ್ದಾರಂತೆ. ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನದ ನಿರೀಕ್ಷೆ ಹೊಂದಿದ್ದ ಸಿಪಿವೈಗೆ ಭಾರೀ ನಿರಾಸೆ ಆಗಿದೆ. ಹೀಗಾಗಿ ಕಾಂಗ್ರೆಸ್​ ಕೈಹಿಡಿದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೈಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿಯಲಿದ್ದಾರೆಂಬ ಮಾತುಗಳು ಕೇಳಿಬಂದಿವೆ.

ಹೆಚ್​ಡಿಕೆ ಕಟ್ಟಿಹಾಕಲು ಪ್ಲಾನ್ ರೂಪಿಸಿರುವ ಡಿ.ಕೆ ಶಿವಕುಮಾರ್ ಹಾಗೂ ಸಿ.ಪಿ.ಯೋಗೇಶ್ವರ್ ಹಾವು ಮುಂಗೂಸಿಯಂತೆ ಕಿತ್ತಾಡಿದ್ದರೂ ಇವರಿಬ್ಬರು ಮತ್ತೆ ಒಂದಾಗುತ್ತಿದ್ದಾರೆ ಅನ್ನೋ ಗುಸುಗುಸು ರಾಜಕೀಯ ವಲಯದಲ್ಲಿ ಶುರುವಾಗಿದೆ.

ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಬಗ್ಗು ಬಡಿಯಲು ಒಂದಾಗುತ್ತಾರಂತೆ ಅನ್ನೋ ಚರ್ಚೆ ಜೋರಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಿಪಿವೈಯನ್ನು ಬಿಜೆಪಿಯಿಂದ ಸೆಳೆಯಲು ಡಿಕೆ ಶಿವಕುಮಾರ್​ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಡಿಕೆಶಿ ಹೇಳುವುದು ಏನು?

ಕೆಲವರು ಪಕ್ಷಕ್ಕೆ ಬರೋರಿದ್ದಾರೆ, ಬೇಡ ಅನ್ನಲ್ಲ. ನನ್ನ ಹೇಳಿಕೆಯಿಂದ
ಕೆಲವರು ಪಕ್ಷಕ್ಕೆ ಬರುವವರು ಇದ್ದಾರೆ, ನಾನು ಬೇಡ ಅನ್ನುವುದಿಲ್ಲ. ಕೆಲವರು ನನಗೆ ಆಗದೇ ಇರಬಹುದು. ಕೆಲವರು ಬೇರೆಯವರಿಗೆ ಆಗದೇ ಇರಬಹುದು. ಆದರೆ ಇದೆಲ್ಲ ವೈಯುಕ್ತಿಕವಾಗಿಲ್ಲ, ಪಾರ್ಟಿ ಅಂತ ನೋಡುತ್ತೇವೆ.

ಡಿ.ಕೆ.ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

Team Newsnap
Leave a Comment
Share
Published by
Team Newsnap

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024