ಸಂಜನಾ, ರಾಗಿಣಿಗೆ ಜಾಮೀನು ನೀಡದಿದ್ದರೆ ಬಾಂಬ್ ಹಾಕ್ತೇವಿ

Team Newsnap
1 Min Read

ಡ್ರಗ್ಗಿಣಿಯರಾದ ನಟಿ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರಿಗೆ ಜಾಮೀನು ನೀಡದಿದ್ದರೆ 
ನ್ಯಾಯಾಲಯ ಮತ್ತು ಪೋಲೀಸ್ ಠಾಣೆಗೆ ಬಾಂಬ್‌ ಹಾಕಿ ಸ್ಫೋಟಿಸುವುದಾಗಿ ಬೆದರಿಕೆ ಪತ್ರದ ಚುರುಕುಗೊಳಿಸಲಾಗಿದೆ.

ಸಿಟಿ ಸಿವಿಲ್ ಸೆಷನ್‌ ಕೋರ್ಟ್‌ನ ಜಡ್ಜ್‌ಗೆ ಈ ಪತ್ರ ಬರೆಯಲಾಗಿದೆ. ‘ಸಂಜನಾ ರಾಗಿಣಿ ಸೇರಿದಂತೆ ಡ್ರಗ್ಸ್‌ ಕೇಸ್‌ನಲ್ಲಿ ಭಾಗಿ ಆಗಿರುವ ಎಲ್ಲರಿಗೂ ಜಾಮೀನು ನೀಡಬೇಕು. ಕೇಸ್‌ನಲ್ಲಿ ಇರುವ ಎಲ್ಲರನ್ನೂ ವಜಾ ಮಾಡಬೇಕು’ ಎಂದು ಪತ್ರದಲ್ಲಿ ಹೇಳಲಾಗಿದೆ. ಒಂದು ವೇಳೆ ಹಾಗೆ ಮಾಡದಿದ್ದರೆ ಕಾರಿನಲ್ಲಿ ಬಾಂಬ್‌ ಇಡುತ್ತೇವೆ ಎಂಬುದಾಗಿಯೂ ಬೆದರಿಕೆ ಹಾಕಲಾಗಿದೆ.

ಸೋಮವಾರ (ಅ.19) ಸಂಜೆ ಈ ಪತ್ರ ಬಂದಿದೆ. ಡ್ರಗ್ಸ್‌ ಕೇಸ್‌ ಮಾತ್ರವಲ್ಲದೆ ಡಿಜೆ ಹಳ್ಳಿ ಪ್ರಕರಣದ ತನಿಖೆಯನ್ನು ನಿಲ್ಲಿಸಿ ಎಂಬುದಾಗಿಯೂ ಮತ್ತೊಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ‘ಸಿಸಿಬಿ ಜಂಟಿ ಆಯುಕ್ತ ಸಂದೀಪ್‌ ಪಾಟೀಲ್‌ ಸುಮ್ಮನಿರಬೇಕು. ಇಲ್ಲದಿದ್ದರೆ ಕಮಿಷನರ್‌ ಕಚೇರಿ ಸ್ಫೋಟ ಮಾಡುತ್ತೇವೆ’ ಎಂದು ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಹಮ್ಮದ್‌ ಜೈಷ್‌ ಉಗ್ರ ಸಂಘಟನೆ ಹೆಸರಿನಲ್ಲಿ ಪತ್ರ ಬಂದಿದ್ದು, ಅವರು ಯಾಕೆ ರಾಗಿಣಿ ಮತ್ತು ಸಂಜನಾರ ಜಾಮೀನಿಗಾಗಿ ಬೇಡಿಕೆ ಇಡುತ್ತಾರೆ ಎಂಬ ಪ್ರಶ್ನೆ ಮೂಡಿದೆ. ನಿಜಕ್ಕೂ ಇದು ಉಗ್ರ ಸಂಘಟನೆಯ ಪತ್ರವೇ ಅಥವಾ ಯಾರೋ ಮಾನಸಿಕ ಅಸ್ವಸ್ಥರು ಈ ರೀತಿ ಮಾಡಿರಬಹುದೇ ಎಂಬ ಅನುಮಾನ ಕೂಡ ಸೃಷ್ಟಿಯಾಗಿದೆ. ತುಮಕೂರಿನ ಗುಬ್ಬಿ ತಾಲೂಕಿನಿಂದ ಈ ಪತ್ರಗಳು ಬಂದಿವೆ ಎನ್ನಲಾಗಿದೆ.

TAGGED: ,
Share This Article
Leave a comment