Main News

ಅಕ್ರಮ ಬಿಪಿಎಲ್ ಕಾಡ್೯ ಇದ್ದರೆ ಮಾ. 31 ರೊಳಗೆ ವಾಪಸ್ಸು ಕೊಡಿ : ಇಲ್ಲದಿದ್ದರೆ ಕ್ರಿಮಿನಲ್ ಕೇಸ್ ಗ್ಯಾರೆಂಟಿ

ಮಾರ್ಚ್ 31 ರೊಳಗೆ ಅಕ್ರಮ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿರುವ ಕುಟುಂಬದವರು ಸ್ವಯಂ ಪ್ರೇರಿತವಾಗಿ ವಾಪಸ್ ನೀಡದಿದ್ದರೆ ಇಲಾಖೆ ಅಧಿಕಾರಿಗಳೇ ಕಾರ್ಯಾಚರಣೆ ನಡೆಸಿ ಅಕ್ರಮ ಎಸಗಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಿದೆ.‌

ರಾಜ್ಯದಲ್ಲಿ ಅಂದಾಜು 10 ಲಕ್ಷ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಆಹಾರ ಇಲಾಖೆ ಮಾಹಿತಿ ಇದೆ.

ಯಾರ ಬಳಿ ಅಕ್ರಮ ಕಾಡ್ ೯ ಇದೆ?

ಸರ್ಕಾರಿ ಅನುದಾನ ಪಡೆಯುತ್ತಿರುವ ಸಿಬ್ಬಂದಿ, ಸರ್ಕಾರಿ ಸ್ವಾಮ್ಯದ ಸಂಸ್ಥೆ, ಮಂಡಳಿ, ನಿಗಮ, ಸ್ವಯತ್ತ ಸಂಸ್ಥೆಯ ಅಧಿಕಾರಿಗಳು, ಸರ್ಕಾರಿ ನೌಕರರು, ವೃತ್ತಿ ತೆರಿಗೆ ಪಾವತಿಸುವ ನೌಕರರು, ಗ್ರಾಮೀಣಾ ಪ್ರದೇಶದಲ್ಲಿ 3 ಹೆಕ್ಟರ್ ಕ್ಕಿಂತ ಹೆಚ್ಚು ಒಣ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು, ನಾಲ್ಕು ಚಕ್ರದ ವಾಹನ ಇರುವ ಕುಟುಂಬಗಳು ಅನಧಿಕೃತವಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಾಗೂ ದಾಖಲೆಗಳನ್ನು ಪತ್ತೆ ಹಚ್ಚಿ‌ಇಟ್ಟುಕೊಂಡಿದೆ.

ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವವರು ಸ್ವಯಂ ಪ್ರೇರಿತವಾಗಿ ಮಾರ್ಚ್ 31 ರೊಳಗೆ ಕಾರ್ಡ್ ಹಿಂದುರಿಗಿಸಬೇಕು. ಇಲ್ಲದಿದ್ದರೆ ಕ್ರೀಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಆಹಾರ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ.

ಇನ್ನು ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲು ಇಲಾಖೆ ಬಹುಮಾನ ಘೋಷಿಸಿದೆ, ಅನರ್ಹ ಪಡಿತರ ಚೀಟಿ ಮಾಹಿತಿ ನೀಡಿದರೆ ಸಾರ್ವಜನಿಕರಿಗೆ 400 ರು. ಬಹುಮಾನವೂ ಸಿಗಲಿದೆ. ಮಾಹಿತಿ ಗೌಪ್ಯವಾಗಿ ಇಡಲಾಗುತ್ತದೆ.

Team Newsnap
Leave a Comment
Share
Published by
Team Newsnap

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024