Main News

ಕೊನೆ ಉಸಿರು ಇರುವ ತನಕ ಮಂಡ್ಯದ ಸೊಸೆಯಾಗಿ ಇರುವೆ – ಸುಮಲತಾ

ಈ ಮಣ್ಣಿನ ಸೊಸೆಯಾಗಿ ನಾನು ಕೊನೆಯ ಉಸಿರು ಇರುವವರೆಗೆ ಇರುತ್ತೇನೆ. ಮಂಡ್ಯದ ಸೊಸೆಯ ಸ್ಥಾನ ಯಾರಿಂದಲೂ ಕಿತ್ತುಕೊಳ್ಳಲು ಆಗಲ್ಲ ಎಂದ ಸಂಸದೆ ಸುಮಲತಾ ಅಂಬರೀಶ್ .

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುಮಲತಾ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಎಲೆಕ್ಷನ್ ಗೆದ್ದ ದಿನದಿಂದಲೂ ಮಂಡ್ಯದಲ್ಲಿ ರಾಜಕೀಯ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ. ಮಂಡ್ಯ ಜಿಲ್ಲೆಗೂ ಸ್ವಾತಂತ್ರ್ಯ ಬರಬೇಕಿದೆ. ಮಂಡ್ಯದಲ್ಲಿ ಬದಲಾವಣೆಯಾಗಬೇಕಿದೆ. ಕೊರೊನಾ ಸಂದರ್ಭದಲ್ಲಿ ಜನ ಪ್ರಾಣ ಕಳೆದುಕೊಳ್ಳುತ್ತಿದ್ದರು. ಈ ವೇಳೆ ಸಭೆ ಕರೆದರೆ ಗಲಭೆಗಳನ್ನು ಮಾಡುತ್ತಾ ಇದ್ದರು. ಇದಕ್ಕೆಲ್ಲಾ ಫುಲ್‌ಸ್ಟಾಪ್ ಇಡಬೇಕು. ಸಚ್ಚಿ ಅಂತಹವರನ್ನು ಮುಂದೆ ಗೆಲ್ಲಿಸಬೇಕು ಎಂದರು.

ಚುನಾವಣೆ ಸಂದರ್ಭದಲ್ಲಿ ರೈತರು ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದರು. ಮೈಶುಗರ್ ಅನ್ನು ಪುನರಾರಂಭ ಮಾಡಬೇಕೆಂದು ಕೇಳಿಕೊಂಡಿದ್ದರು. 3 ವರ್ಷದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿರುವುದು ನಿಮ್ಮ ಮುಂದೆಯೇ ಇದೆ. ಕೆಆರ್‌ಎಸ್‌ಗೆ ಅಪಾಯವಾಗುವ ಜಾಗದಲ್ಲಿ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

ಎಷ್ಟೋ ವರ್ಷಗಳ ಹೋರಾಟ. ನಾನು 3 ವರ್ಷದಿಂದ ಸಿಎಂ ಹಾಗೂ ಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಈಗ ಕೊಟ್ಟ ಮಾತನ್ನು ನೆರವೇರಿಸಿರುವ ತೃಪ್ತಿ ನನಗಿದೆ. ಒಂದಷ್ಟು ಜನ ಹೇಳುತ್ತಾರೆ, ರಾಜಕೀಯದಲ್ಲಿ ಏನು ಮಾಡಬೇಕು ಎಂದು ಸಲಹೆ ನೀಡುತ್ತಾರೆ. ನನಗೆ ಬೆಂಬಲ ಕೊಟ್ಟಿರುವವರ ಕೈಯನ್ನು ನಾನು ಬಿಡುವುದಿಲ್ಲ. ಸಚ್ಚಿಯನ್ನು ಸಹ ಕೈ ಬಿಡುವುದಿಲ್ಲ. ಅಂಬರೀಶ್ ಅವರು ಸೀಟ್ ಕೊಡಿ, ಮಂತ್ರಿ ಸ್ಥಾನ ಕೊಡಿ ಎಂದು ಕೇಳಿಲ್ಲ. ಅವರ ದಾರಿಯಲ್ಲಿಯೇ ನಾನು ಕೂಡಾ ನಡೆದುಕೊಂಡು ಹೋಗುತ್ತೇನೆ ಎಂದರು.

ಕೆಂಪುಕೋಟೆಯಲ್ಲಿ ಹಾರಿದ ತ್ರಿವರ್ಣ ಧ್ವಜ, ಪ್ರಧಾನಿ ಮೋದಿಯಿಂದ ಧ್ವಜಾರೋಹಣ

ಅಂಬರೀಶ್ ಕುಟುಂಬದಲ್ಲಿ ಕುಟುಂಬ ರಾಜಕೀಯ ಮಾಡುವುದಿಲ್ಲ. ಕುಟುಂಬ ರಾಜಕೀಯ ಮಾಡುವವರು ಇದ್ದಾರೆ, ಅರ‍್ಯಾರು ಎಂಬುದು ಎಲ್ಲರಿಗೂ ಗೊತ್ತು. ಇನ್ನು 7-8 ತಿಂಗಳಿನಲ್ಲಿ ಬದಲಾವಣೆಗೆ ಅವಕಾಶವಿದೆ. ಆ ಬದಲಾವಣೆಗಳನ್ನು ಮಾಡಿ, ಈ ಮಣ್ಣಿನ ಸೊಸೆಯಾಗಿಯೇ ಇರುವೆ ಎಂದು ಹೇಳಿಕೆ ನೀಡಿದರು.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024