ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಗಳ ತನಿಖೆಯನ್ನು ಸಿ.ಐ.ಡಿ. ಚುರುಕುಗೊಳಿಸಿ ಬುಧವಾರ ರಾಜ್ಯದ ವಿವಿದೆಡೆ 51 ಸ್ಥಳಗಳಲ್ಲಿ ದಾಳಿ ಮಾಡಿ 38 ಶಿಕ್ಷಕರನ್ನು ಬಂಧಿಸಿದೆ.
ಸಿಐಡಿ ಇದುವರೆಗೆ ಶಿಕ್ಷಕರು ಮತ್ತು ನಿರ್ದೇಶಕರುಗಳನ್ನು ಸೇರಿದಂತೆ ಒಟ್ಟು 22 ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಹೆಚ್ಚುವರಿಯಾಗಿ ಶಿಕ್ಷಕರು ಅಕ್ರಮವಾಗಿ ನೇಮಕವಾಗಿದ್ದಾರೆಂಬ ವರದಿಯ ಬೆನ್ನಲ್ಲಿ ಸಿ.ಐ.ಡಿ. ಆರೋಪಿಗಳ ಪತ್ತೆಗಾಗಿ 30 ವಿಶೇಷ ತ೦ಡಗಳನ್ನು ರಚಿಸಿ ಕೋಲಾರ, ಚಿ.ಕ್ಕಬಳ್ಳಾಪುರ, ಬೆ೦ಗಳೂರು ದಕ್ಷಿಣ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲದಲ್ಲಿ 51 ಸ್ಥಳಗಳಲ್ಲಿ ದಾಳಿ ನಡೆಸಿ ಅಕ್ರಮವಾಗಿ ನೇಮಕವಾಗಿದ್ದ 38 ಜನ ಶಿಕ್ಷಕರನ್ನು ಬಂಧಿಸಿದೆ.ಅ. 28 ರಂದು ಶಿವಪುರ ಸತ್ಯಾಗ್ರಹ ಸೌಧದಲ್ಲಿ ಬೃಹತ್ ಕೋಟಿ ಕಂಠ ಗಾಯನ : ಡಾ. H L ನಾಗರಾಜು
ಎಲ್ಲಿ ? ಎಷ್ಟು ಮಂದಿ ಶಿಕ್ಷಕರ ಬಂಧನ ?
ಬುಧವಾರ ಸಿಐಡಿ ಯಾವ ಜಿಲ್ಲೆಯಿಂದ ಎಷ್ಟು ಮಂದಿ ಶಿಕ್ಷಕರನ್ನು ಬಂಧಿಸಿದೆ ಎಂಬ ಮಾಹಿತಿ ಬಿಡುಗಡೆ ಮಾಡಿದೆ.
ಕೋಲಾರದಿಂದ 24 ಶಿಕ್ಷಕರು, ಬೆ೦ಗಳೂರು ದಕ್ಷಿಣ ಜಿಲ್ಲೆಯಿಂದ 5 ಶಿಕ್ಷಕರು, ಚಿಕ್ಕಬಳ್ಳಾಪುರ ಜಿಲ್ಲೆಯಿ೦ದ 3 ಶಿಕ್ಷಕರು ಮತ್ತು ಚಿತ್ರದುರ್ಗ ಜಿಲ್ಲೆಯಿ೦ದ 5 ಶಿಕ್ಷಕರನ್ನು ದಸ್ತಗಿರಿ ಮಾಡಲಾಗಿದೆ. ಉಳಿದ ಆರೋಪಿಗಳ ಪತ್ತೆಕಾರ್ಯ ಮುಂದುವರೆದಿದೆ.
ಸಿಐಡಿಯ ಕಾರ್ಯಚರಣೆಯಲ್ಲಿ 18 ಡಿವೈಎಸ್ಪಿ ಹಾಗೂ 14 ಪೊಲೀಸ್ಇನ್ಸ್ ಪೆಕ್ಟರ್ ಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು