ಬೆಂಗಳೂರಿನ ಎಸ್ಜೆಬಿಐಟಿ ಕಾಲೇಜು ಪ್ರೊಫೆಸರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕದಂಬ ಲೇಔಟ್ನಲ್ಲಿ ಜರುಗಿದೆ.
ಚೈತ್ರಾ (41) ಆತ್ಮಹತ್ಯೆಗೆ ಶರಣಾದ ಪ್ರೊಫೇಸರ್.ಇದನ್ನು ಓದಿ –ಆನೆ ಕೊಂದ ಆರೋಪಿಗಳಿಗೆ ಪ್ರಜ್ವಲ್ ರೇವಣ್ಣ ರಕ್ಷಣೆ ಮನೇಕಾ ಗಾಂಧಿ ಗಂಭೀರ ಆರೋಪ- ಸಿಎಂಗೆ ಪತ್ರ
ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಚೈತ್ರಾ ಅವರ ಪತಿ ಗುರುಪ್ರಸಾದ್ ಶಿಗ್ಗಾವಿಯಲ್ಲಿ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ
ನನ್ನ ಸಾವಿಗೆ ನಾನೇ ಕಾರಣ. ನನಗೆ ತೀವ್ರವಾದ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ನನ್ನನ್ನು ಕ್ಷಮಿಸಿ ಬಿಡಿ ಎಂಬ ನೋಟ್ಮೃತದೇಹದ ಬಳಿ ಪತ್ತೆಯಾಗಿದೆ
ಬೆಳಗ್ಗೆ ಚೈತ್ರಾ ಪತಿಯು ಫೋನ್ ಮಾಡಿದಾಗ ರೀಸಿವ್ ಮಾಡಿರಲಿಲ್ಲ. ಹೀಗಾಗಿ ಅವರು ಚೈತ್ರಾ ಅವರ ಸಹೋದರನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ , ಅವರು ಬಂದು ಮನೆಯ ಬಾಗಿಲು ಮುರಿದು ನೋಡಿದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಚೈತ್ರಾ ಅವರ ಮೃತದೇಹ ಪತ್ತೆಯಾಗಿದೆ.
ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲು ಮಾಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ