Trending

ಬಹುಪತ್ನಿತ್ವ ಸ್ವೀಕರಿಸಲು ನಾನು ಸಿದ್ಧ: ಪೋಸ್ಟರ್​ ಹಿಡಿದು ಬೀದಿ ಬೀದಿ ಅಲೆಯುತ್ತಿರುವ ಯುವತಿ!

ಸುಡಾನ್​​​ ಮೂಲದ ಯುವತಿಯೊಬ್ಬಳು ಹೊಸ ಮಾದರಿಯಲ್ಲಿ ಭಾವಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾಳೆ.ವರ ಬೇಕು ಎಂಬ ಭಿತ್ತಿ ಫಲಕವನ್ನು ಹಿಡಿದು ಸುಡಾನ್​ನ ರಾಜಧಾನಿ ಖಾರ್ಟೂಮ್​ನ ಬೀದಿ ಬೀದಿಯಲ್ಲಿ ಮಹಿಳೆ ಅಲೆದಾಡುತ್ತಿದ್ದಾಳೆ.

ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದು ವೈರಲ್​ ಆಗಿದೆ. ಈ ಯುವತಿ ಟ್ರಾಫಿಕ್​ ಸಿಗ್ನಲ್​ ಬಳಿ ಭಿತ್ತಿ ಫಲಕ ಹಿಡಿದು ನಿಂತಿದ್ದಾಳೆ. ನನಗೆ ವರ ಬೇಕಿದ್ದಾನೆ. ನಾನು ಮದುವೆಯಾಗಬೇಕಿದೆ. ನಾನು ಬಹುಪತ್ನಿತ್ವ ಸ್ವೀಕರಿಸಲೂ ಸಿದ್ಧಳಾಗಿದ್ದೇನೆ ಎಂಬ ಬರಹ ಯುವತಿ ಹಿಡಿದಿರುವ ಭಿತ್ತಿ ಫಲಕದಲ್ಲಿದೆ. ಅಲ್ಲದೆ, ಮೊಬೈಲ್​ ನಂಬರ್​ ಕೂಡ ಅದರಲ್ಲಿದೆ.

ಫೋಟೋ ವೈರಲ್​ ಆಗುತ್ತಿದ್ದಂತೆ ಯುವತಿ ಬಹು ಚರ್ಚೆಯ ವಿಷಯವಾಗಿದ್ದಾಳೆ. ಕಳೆದ ಕೆಲವು ವರ್ಷಗಳಿಂದ, ಸುಡಾನ್​ನಲ್ಲಿ ಮದುವೆ ದರದಲ್ಲಿ ಗಮನಾರ್ಹ ಕುಸಿತ ಮತ್ತು ವಿಚ್ಛೇದನಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ವರದಿಯಾಗಿದೆ.

ಇದನ್ನು ಓದಿ :ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮನೆ ಸೇರಿ 7 ಕಡೆ CBI ದಾಳಿ

ಮದುವೆಗಳು ಕಡಿಮೆ – ವಿಚ್ಛೇದನ ಹೆಚ್ಚು :

ಸುಡಾನ್​ನಲ್ಲಿ 2020ರಲ್ಲಿ ಮದುವೆ ದರವು 2018ಕ್ಕೆ ಹೋಲಿಸಿದರೆ ಶೇಕಡ 21 ರಷ್ಟು ಕಡಿಮೆಯಾಗಿದೆ. 2018ರಲ್ಲಿ 1,80,563 ಮದುವೆ ನೋಂದಣಿಯಾಗಿದ್ದವು. ಈ ಸಂಖ್ಯೆಗೆ ಹೋಲಿಸಿದರೆ 2020ರಲ್ಲಿ 142,949 ವಿವಾಹಗಳು ನಡೆದಿದ್ದು, ಕುಸಿತ ಕಂಡಿದೆ. ತಜ್ಞರ ಪ್ರಕಾರ, ಸುಡಾನ್‌ನಲ್ಲಿನ ಕೆಟ್ಟ ಆರ್ಥಿಕ ಪರಿಸ್ಥಿತಿ ಮತ್ತು ಸಾಂಕ್ರಾಮಿಕದ ಪ್ರಭಾವ ಸೇರಿದಂತೆ ಹಲವು ಕಾರಣಗಳು ದೊಡ್ಡ ಕುಸಿತಕ್ಕೆ ಕಾರಣವಾಗಿದೆ.ಕಳೆದ ವರ್ಷ ಸುಡಾನ್ ನ್ಯಾಯಾಂಗ ಇಲಾಖೆ ಮಾಹಿತಿಯಂತೆ ಸುಡಾನ್‌ನಲ್ಲಿ ಪ್ರತಿ ಗಂಟೆಗೆ ಏಳು ವಿಚ್ಛೇದನಗಳು ಸಂಭವಿಸುತ್ತವೆ. 2020 ರಲ್ಲಿ ಡಿವೋರ್ಸ್​ ಪ್ರಕರಣಗಳ ಸಂಖ್ಯೆ 60,000 ಕ್ಕಿಂತ ಹೆಚ್ಚಿವೆ.

Team Newsnap
Leave a Comment
Share
Published by
Team Newsnap

Recent Posts

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024