ಕರ್ನಾಟಕದಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಮಗಳೂರು ಮತ್ತು ಉಡುಪಿ, ದಕ್ಷಿಣ ಕರ್ನಾಟಕ, ಮೈಸೂರು, ಮಂಡ್ಯ, ಚಾಮರಾಜನಗರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ.
ಇದನ್ನು ಓದಿ – ‘ ಆರಂಭ’ ಚಿತ್ರದ ಹೀರೋ ಉದಯ್ ಹುತ್ತಿನಗದ್ದೆ ಇನ್ನಿಲ್ಲ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನೂ ನೀಡಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಸಿಡಿಲು ಮತ್ತು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯಾವುದೇ ತೊಂದರೆಯಾಗುವುದಿಲ್ಲ.
ಈ ಬೆಳವಣಿಗೆಯು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ಕುರಿತು IMD ಪ್ರಕಟಣೆ ನೀಡಿದೆ. ಇದನ್ನು ಓದಿ – ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಹಳದಿ ಎಚ್ಚರಿಕೆಯು ಕೇವಲ ವೀಕ್ಷಣೆಯ ಸಂಕೇತವಾಗಿದೆ ಮತ್ತು ಈ ಎಚ್ಚರಿಕೆಯ ಸಮಯದಲ್ಲಿ ಹವಾಮಾನ ಪರಿಸ್ಥಿತಿಯು 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗುತ್ತದೆ. ಮೇ ತಿಂಗಳ ಹಿಂದೆ, ಬೆಂಗಳೂರು ನಗರದ ಬಹಳಷ್ಟು ಪ್ರದೇಶಗಳನ್ನು ಜಲಾವೃತಗೊಳಿಸಿದ ಭಾರೀ ಮಳೆಗೆ ಆರೆಂಜ್ ಅಲರ್ಟ್ ಆಗಿತ್ತು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
ಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು, 7 ಪ್ರಯಾಣಿಕರು ಸಜೀವವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ
ಗೂಡ್ಸ್ ಲಾರಿ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಖಾಸಗಿ ಬಸ್ ಕಂದಕ್ಕೆ ಬಿದ್ದು ಬೆಂಕಿ ಹತ್ತಿಕೊಂಡು ಧಗ ಧಗ ಉರಿದೆ
ಬಸ್ನಲ್ಲಿ 35 ಕ್ಕೂ ಹೆಚ್ಚು ಜನ ಪ್ರಯಾಣಿಕರು ಇದ್ದರು. ಗೋವಾದಿಂದ ಹೈದ್ರಾಬಾದ್ಗೆ ಖಾಸಗಿ ಬಸ್ ತೆರಳುತ್ತಿತ್ತು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಜಿಲ್ಲಾ ಎಸ್ಪಿ ಇಶಾ ಪಂತ್ ಸೇರಿದಂತೆ ಹಿರಿಯ ಪೋಲಿಸ್ ಅಧಿಕಾರಿಗಳು ಧಾವಿಸಿದ್ದಾರೆ
ಈ ದುರ್ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಗೆ ಹತ್ತಿದ್ದ ಬೆಂಕಿಯನ್ನು ನಂದಿಸಲಾಗಿದೆ. ಆದರೆ ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಅಂಗವಿಕಲರೊಬ್ಬರ ಆಧಾರ ಕಾರ್ಡ್ ಸಮಸ್ಯೆ 2 ವರ್ಷದಿಂದ ಸ್ಪಂದನೆ ಮಾಡದ ಮಂಡ್ಯ ಜಿಲ್ಲಾಡಳಿತ ಹಾಗೂ ತಾಲೂಕು ಕಚೇರಿಗೆ ಪ್ರಧಾನಿ ಮೋದಿ ಕಾರ್ಯಾಲಯವು ಕೇವಲ ಎರಡೇ ದಿನ ಸ್ಪಂದನೆ ಮಾಡಿ ತಂಡಸನಹಳ್ಳಿ ನೂತನ್ ಸಮಸ್ಯೆಗೆ ಪರಿಹಾರ ಸಿಕ್ಕಿದೆ
ಮಂಡ್ಯದ ಅಂಗವಿಕಲ ನೂತನ್ಆ ಧಾರ್ ಸಮಸ್ಯೆಯಿಂದಾಗಿ ಸರ್ಕಾರಿ ಸೌಲಭ್ಯಗಳಿಂದ ವಂಚಿತನಾಗಿದ್ದರು
ಚರ್ಮ ಕಾಯಿಲೆಯಿಂದ ಆಧಾರ್ ಕಾರ್ಡ್ನಿಂದ ವಂಚಿನಾಗಿದ್ದ ನೂತನ್ ಗೆ ಈ ಹಿಂದೆ ಮಾಡಿಸಿದ್ದ ಆಧಾರ್ ಗೆ ಮೊಬೈಲ್ ನಂಬರ್ ಲಿಂಕ್ ಆಗದಿರೋದ್ರಿಂದ ಬ್ಲಾಕ್ ಆಗಿತ್ತು. ಮತ್ತೆ ಆಕ್ಟೀವ್ ಮಾಡಿಸಲು ಸಮಸ್ಯೆಯಾಗಿದ್ದು ಈ ಚರ್ಮ ಕಾಯಿಲೆ.
ಬಯೋಮೆಟ್ರಿಕ್ ಆತನ ಗುರುತು ತೆಗೆದುಕೊಳ್ಳುತ್ತಿರಲಿಲ್ಲ, ಕಣ್ಣಿನ ಸ್ಕ್ಯಾನ್ ಆಗಿರಲಿಲ್ಲ. ಸಮಸ್ಯೆ ಪರಿಹರಿಸುವಂತೆ ಮಂಡ್ಯ ಡಿಸಿ, ಸಂಸದೆ ಸುಮಲತಾಗೆ ಮನವಿ ನೀಡಿದರೂ ಯಾವ ಪರಿಹಾರವೂ ಸಿಗಲಿಲ್ಲ
ಆಗ ಈ ನೂತನ್ ರೈತ ಮುಖಂಡ ಮಧುಚಂದನ್ ಬಳಿ ತನ್ನ ಸಮಸ್ಯೆ ಹೇಳಿಕೊಂಡಿದ್ದ. ನೂತನ್ ಅಕ್ಕ ಸಂಧ್ಯಾ ನರೇಂದ್ರ ಮೋದಿಗೆ ಪತ್ರ ಬರೆದು, ಪ್ರಧಾನಿ ಕಚೇರಿಗೆ ಟ್ಯಾಗ್ ಮಾಡಿದ್ದ ಮಧುಚಂದನ್.
ಟ್ವೀಟ್ ಮಾಡಿದ ಒಂದೇ ದಿನಕ್ಕೆ ಅಧಿಕಾರಿಗಳಿಂದ ನೂತನ್ ಗೆ ಫೋನ್ ಕರೆ, ಎರಡನೇ ದಿನವೇ ಆಧಾರ್ ಕಾರ್ಡ್ ಆಕ್ಟೀವ್ ಆಗಿದೆ
ಸಮಸ್ಯೆ ಪರಿಹಾರದ ಬಳಿಕ ನರೇಂದ್ರ ಮೋದಿ, ರೈತ ಮುಖಂಡ ಮಧುಚಂದನ್ ಗೆ ನೂತನ್ ಕುಟುಂಬ ಧನ್ಯವಾದ ಹೇಳಿದೆ.
IMD IMD IMD IMD IMD IMD